ಬೆಂಗಳೂರು: ವಾಟಾಳ್ ನಾಗರಾಜ್ ಅವರ ಪತ್ನಿ ಜ್ಞಾನಾಂಬಿಕೆ ವಾಟಾಳ್ ನಾಗರಾಜ್ (60ವರ್ಷ) ಕಿಡ್ನಿ ವೈಫಲ್ಯದಿಂದ ಮಂಗಳವಾರ ಸಂಜೆ 7:30ಕ್ಕೆ ಶೇಷಾದ್ರಿಪುರಂನ ಮಲ್ಲಿಗೆ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರ ಪಾರ್ಥಿವ ಶರೀರವನ್ನು ವಾಟಾಳ್ ನಾಗರಾಜ್ ಅವರ ಸ್ವಗೃಹ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಇಡಲಾಗಿದೆ.
ಬುಧವಾರ ಬೆಳಗ್ಗೆ 9:00ಕ್ಕೆ ಬೆಂಗಳೂರಿನಿಂದ ಪಾರ್ಥಿವ ಶರೀರ ತೆಗೆದುಕೊಂಡು ಹೊರಟು ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ 16 ಗ್ರಾಮದ ಜಮೀನಿನಲ್ಲಿ ಅಂತಿಮ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.