ಬೆಂಗಳೂರು: ವಿದೇಶಗಳಿಂದ ಆಮದು ಮಾಡಿಕೊಳ್ಳುವ ಪದಾರ್ಥಗಳ ಪಟ್ಟಿಯಲ್ಲಿ ಹಾಲಿನ ಉತ್ಪನ್ನಗಳನ್ನು ಸೇರಿಸಿರುವುದನ್ನು ಕೈಬಿಡಬೇಕು ಎಂದು ವಿಧಾನಸಭೆಯಲ್ಲಿ ಎಲ್ಲ ಪಕ್ಷಗಳ ಸದಸ್ಯರು ಕೇಂದ್ರವನ್ನು ಒತ್ತಾಯಿಸಿದರು.
ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್ನ ಅಮರೇಗೌಡ ಬೈಯ್ಯಾಪುರ ವಿಷಯ ಪ್ರಸ್ತಾಪಿಸಿ, ಕೇಂದ್ರ ಸರ್ಕಾರ ಹಾಲಿನ ಆಮದಿಗೆ ಅನುಮತಿ ನೀಡಿದೆ. ಇದರಿಂದ ರಾಜ್ಯದ ಹಾಲು ಉತ್ಪಾದಕರಿಗೆ ತೊಂದರೆ ಆಗುತ್ತದೆ ಎಂದರು.
ಆಗ ಬಿಜೆಪಿಯ ಜಿ. ಸೋಮಶೇಖರ ರೆಡ್ಡಿ ಮಧ್ಯ ಪ್ರವೇಶಿಸಿ, ಹಾಲಿನ ಆಮದಿಗೆ ಅನುಮತಿ ನೀಡಿಲ್ಲ. ಹಾಲಿನ ಕೆಲವು ಉತ್ಪನ್ನಗಳ ಆಮದಿಗೆ ಅನುಮತಿ ನೀಡಿದೆ ಎಂದರು.
ಜೆಡಿಎಸ್ನ ವೆಂಕಟರಾವ್ ನಾಡಗೌಡ ಮಾತನಾಡಿ, ಕರ್ನಾಟಕ ಹಾಲಿನ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಹಾಲು ಅಥವಾ ಹಾಲಿನ ಉತ್ಪನ್ನಗಳ ಆಮದು ಬೇಡ ಎಂದು ಒತ್ತಾಯಿಸಿದರು.