ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರಸಂಬಿತ್ ಪಾತ್ರಾ, ‘ಅವರೊಬ್ಬ(ಮನಮೋಹನ್ ಸಿಂಗ್) ಅರ್ಥಶಾಸ್ತ್ರಜ್ಞ. ಆದರೆ, ಅವರ ಹಿಂದೆ ಇದ್ದ ವ್ಯಕ್ತಿಗಳು ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತವನ್ನು ಉತ್ತೇಜಿಸಲು ಅವರನ್ನು ಕೈಗೊಂಬೆಯಾಗಿಸಿಕೊಂಡಿದ್ದವು. ಇದರಿಂದ ದೇಶದ ಅರ್ಥ ವ್ಯವಸ್ಥೆಗೆ ಎಷ್ಟು ಅನ್ಯಾಯವಾಗಿದೆ ಎಂಬುದು ನಮಗೆ ಗೊತ್ತಿದೆ’ ಎಂದು ಕಿಡಿಕಾರಿದ್ದಾರೆ.