ಸುಪ್ರೀಂ ಕೋರ್ಟ್ನ ಆದೇಶದ ಪ್ರಕಾರ ದೇಶದಲ್ಲಿ ಗಾಜಿನ ಪುಡಿ ಲೇಪಿತ ಮಾಂಜಾ ದಾರದ ಸಂಗ್ರಹಣೆ, ಮಾರಾಟವನ್ನು ನಿಷೇಧಿಸಲಾಗಿದೆ. ಆದರೆ, ಅದರ ಮಾರಾಟ ಮಾತ್ರ ನಿಂತಿಲ್ಲ. ಹೀಗಾಗಿ ನಿತ್ಯವೂ ಮಾಂಜಾ ದಾರದಿಂದಾದ ಅವಘಡಗಳ ಕುರಿತು ವರದಿಯಾಗುತ್ತಲೇ ಇದೆ. ಹಲವರು ಪ್ರಾಣ ತೆತ್ತಿದ್ದಾರೆ. ಪಕ್ಷಿ ಸಂಕುಲಕ್ಕೂ ಇದು ಮಾರಕವಾಗಿದೆ.ದೇಶದಲ್ಲಿ ಪ್ರತಿ ನಿಮಿಷಕ್ಕೆ 3 ಪಕ್ಷಿಗಳು ಮಾಂಜಾ ದಾರಕ್ಕೆ ಬಲಿಯಾಗುತ್ತಿವೆ ಎನ್ನುತ್ತವೆ ವರದಿಗಳು.