ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮೊದಲು ಮಹಾರಾಷ್ಟ್ರದ ಲಾಥೂರ್ಗೆ ಭೇಟಿ ನೀಡಿರುವ ಅವರು, ಅಲ್ಲಿ ಕಾಂಗ್ರೆಸ್ ವಿರುದ್ಧ ಪಾಕಿಸ್ತಾನದ ಅಸ್ತ್ರ ಪ್ರಯೋಗಿಸಿದ್ದಾರೆ. ’ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸುವ ಸಂವಿಧಾನದ ವಿಧಿ 370 ಅನ್ನು ರದ್ದು ಮಾಡುವುದಿಲ್ಲ ಎಂದು ಕಾಂಗ್ರೆಸ್ ಹೇಳುತ್ತದೆ. ಅದರ ಪ್ರಣಾಳಿಕೆ ಪಾಕಿಸ್ತಾನದ ರೀತಿಯಲ್ಲಿದೆ. ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ನವರು ಪ್ರತ್ಯೇಕತಾವಾದಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ಹೇಳಿಕೊಂಡಿದ್ದಾರೆ. ಆದರೆ, ಪಾಕಿಸ್ತಾನ ಕೂಡ ಅದೇ ಉದ್ದೇಶವನ್ನೇ ಪ್ರತಿಪಾದಿಸುತ್ತಾ ಬಂದಿದೆ,’ ಎಂದು ಅವರು ಟೀಕಿಸಿದರು.