ಹೈದರಾಬಾದ್: ಎರಡು ವರ್ಷಗಳ ಹಿಂದೆ ‘ಉತ್ತಮ ತಹಸೀಲ್ದಾರ್‘ ಪ್ರಶಸ್ತಿ ಪಡೆದಿದ್ದ ಕಂದಾಯ ಇಲಾಖೆ ಅಧಿಕಾರಿ ವಿ.ಲಾವಣ್ಯ ಅವರನ್ನು ಭ್ರಷ್ಟಾಚಾರ ಆರೋಪದಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಲಾವಣ್ಯ ಅವರ ನಿವಾಸದ ಮೇಲೆ ದಾಳಿ ನಡೆಸಿ ₹ 93.5 ಲಕ್ಷ ನಗದು ಮತ್ತು 400 ಗ್ರಾಂ ಚಿನ್ನವನ್ನು ವಶ ಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.