ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ ಕಾಶ್ಮೀರ ಬೇಡಿಕೆ ಕೈಬಿಡಬೇಕು: ಅಫ್ರಿದಿ ಹೇಳಿಕೆ ಸರಿ–ರಾಜನಾಥ್‌ ಸಿಂಗ್‌

Last Updated 15 ನವೆಂಬರ್ 2018, 10:23 IST
ಅಕ್ಷರ ಗಾತ್ರ

ಲಂಡನ್‌:ಪಾಕಿಸ್ತಾನ ತನ್ನ ನಾಲ್ಕು ಪ್ರಾಂತ್ಯಗಳನ್ನು ಸಮರ್ಥವಾಗಿ ನಿರ್ವಹಿಸುತ್ತಿಲ್ಲ. ಹೀಗಿರುವಾಗ ಕಾಶ್ಮೀರವನ್ನು ನಿಯಂತ್ರಿಸಲು ಸಾಧ್ಯವೇ? ಎಂದು ಪಾಕಿಸ್ತಾನದಮಾಜಿ ಕ್ರಿಕೆಟಿಗಶಾಹಿದ್‌ ಅಫ್ರಿದಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಗೃಹಸಚಿವ ರಾಜನಾಥ್ ಸಿಂಗ್ ಆಫ್ರಿದಿ ಹೇಳಿಕೆ ಸರಿಯಾಗಿದೆ ಎಂದು ಹೇಳಿದ್ದಾರೆ.

ಅಫ್ರಿದಿಹೇಳಿಕೆ ಸರಿಯಾಗಿದೆ,ಪಾಕಿಸ್ತಾನವು ತನ್ನ ನಾಲ್ಕು ಪ್ರಾಂತ್ಯಗಳಾದ ಪಂಜಾಬ್‌, ಸಿಂಧ್‌, ಬಲೂಚಿಸ್ತಾನ, ಖೈಬರ್‌ ಪಕ್ತುಂಕ್ವಾ ಪ್ರದೇಶಗಳನ್ನೇ ಸಮರ್ಥವಾಗಿ ನಿರ್ವಹಿಸುತ್ತಿಲ್ಲ. ಹೀಗಿರುವಾಗ ಕಾಶ್ಮೀರವನ್ನು ನಿಯಂತ್ರಿಸಲು ಸಾಧ್ಯವೇ? ಕಾಶ್ಮೀರ ಯಾವಾಗಲೂ ಭಾರತದ ಅವಿಬಾಜ್ಯ ಅಂಗ ಎಂದು ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ಅಫ್ರಿಧಿ ಹೇಳಿಕೆ ಸರಿಯಾಗಿದೆ ಎಂದಿದ್ದಾರೆ.

ಪಾಕಿಸ್ತಾನದ ಮಾಜಿ ಕ್ರಿಕೆಟಿಗಶಾಹಿದ್‌ ಅಫ್ರಿದಿ ಲಂಡನ್‌ನಲ್ಲಿ ಬುಧವಾರಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪಾಕಿಸ್ತಾನ ಕಾಶ್ಮೀರ ಬೇಡಿಕೆಯನ್ನು ಕೈಬಿಡಬೇಕು ಎಂದಿದ್ದರು. ಇದರಿಂದಪಾಕ್‌ ಸರ್ಕಾರ ಹಾಗೂ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ಉಂಟಾಗಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT