ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ದೇಶದ 81 ಕೋಟಿ ಜನರು ನೋಂದಾಯಿಸಿಕೊಂಡಿದ್ದಾರೆ. ಇವರಿಗೆ ಪಡಿತರ ವ್ಯವಸ್ಥೆ ಅಡಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಆದರೆ, ಈ ವ್ಯಾಪ್ತಿಯಲ್ಲಿ ಇಲ್ಲದ ಬಡವರಿಗೆ ರಾಜ್ಯ ಸರ್ಕಾರಗಳು ಆಹಾರ ಧಾನ್ಯ ಒದಗಿಸಬೇಕಿದೆ. ಇದಕ್ಕಾಗಿ ಎಫ್ಸಿಐ ಗೋದಾಮಿನಲ್ಲಿ ಇರುವ ಹೆಚ್ಚುವರಿ ಅಕ್ಕಿ ಮತ್ತು ಗೋದಿಯನ್ನು ಮುಕ್ತಮಾರುಕಟ್ಟೆ ಮಾರಾಟ ಯೋಜನೆ ಅಡಿ ಒದಗಿಸುತ್ತೇವೆ. ರಾಜ್ಯ ಸರ್ಕಾರಗಳು ಇವನ್ನು ಖರೀದಿಸಲಿ ಎಂದು ಕೇಂದ್ರ ಆಹಾರ ಸಚಿವ ರಾಮವಿಲಾಸ್ ಪಾಸ್ವಾನ್ ಸೂಚಿಸಿದ್ದಾರೆ.