<p><strong>ನವದೆಹಲಿ:</strong> ಮಹದಾಯಿ, ಕಳಸಾ–ಬಂಡೂರಿ ನಾಲೆಗಳ ತಿರುವು ಯೋಜ ನೆಗೆ ಅನುಮತಿ ನೀಡಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್ಪಿ)ಯು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ)ಗೆ ದೂರು ಸಲ್ಲಿಸಿದೆ.</p>.<p>ಕೇಂದ್ರ ಸರ್ಕಾರವು ಗೋವಾದ ಆಕ್ಷೇಪದ ನಡುವೆಯೂ ಯೋಜನೆಗೆ ಏಕಪಕ್ಷೀಯವಾಗಿ ಅನುಮತಿ ನೀಡಿರು ವುದು ಸರಿಯಲ್ಲ ಎಂದು ಪಕ್ಷದ ಅಧ್ಯಕ್ಷ ವಿಜಯ್ ಸರದೇಸಾಯಿ ಸೋಮವಾರ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಕರ್ನಾಟಕದಲ್ಲಿ ನಡೆಯಲಿರುವ ಉಪ ಚುನಾವಣೆಯನ್ನು ದೃಷ್ಟಿಯಲ್ಲಿ ಇರಿಸಿಕೊಂಡೇ ಕೇಂದ್ರವು ಪರಿಸರ ಇಲಾಖೆಯ ಅನುಮತಿ ನೀಡಿದೆ. ಪರಿಸರಕ್ಕೆ ಧಕ್ಕೆ ಉಂಟು ಮಾಡಬಲ್ಲ ಯೋಜನೆಯನ್ನು ವಿರೋಧಿಸಿ ಗೋವಾ ನಡೆಸಿರುವ ಹೋರಾಟ ಲೆಕ್ಕಿಸದ ಕೇಂದ್ರ ಸರ್ಕಾರ ಕರ್ನಾಟಕದ ಪರವಾಗಿ ನಿಲ್ಲಲು ಮುಂದಾಗಿದೆ ಎಂದು ಅವರು ಆರೋಪಿಸಿದ್ದಾರೆ.</p>.<p>ಮಹದಾಯಿ ನದಿ ಹರಿದಿರುವ ಪಶ್ಚಿಮಘಟ್ಟದ ಪರಿಸರಕ್ಕೆ ಈ ಯೋಜನೆ ಯಿಂದಾಗಿ ತೀವ್ರ ಧಕ್ಕೆಯಾಗಲಿದೆ ಎಂದೂ ಅವರು ಎನ್ಜಿಟಿಗೆ ಸಲ್ಲಿಸಿರುವ ದೂರಿನಲ್ಲಿ ವಿವರಿಸಿದ್ದಾರೆ.</p>.<p><strong>ಸಚಿವ ಜಾವಡೇಕರ್ ಭೇಟಿ ಮಾಡಿದ ಗೋವಾ ನಿಯೋಗ</strong><br /><strong>ಪಣಜಿ</strong>: ಕಳಸಾ ಬಂಡೂರಿ ಯೋಜನೆಗೆ ಪರಿಸರ ಇಲಾಖೆ ಅನುಮೋದನೆ ನೀಡಿದೆ ಎಂಬ ಹಿನ್ನೆಲೆಯಲ್ಲಿ ಆತಂಕ ವ್ಯಕ್ತಪಡಿಸಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ಸರ್ವಪಕ್ಷಗಳ ನಿಯೋಗ ಸೋಮವಾರ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.</p>.<p>ದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿದ್ದ ನಿಯೋಗದಲ್ಲಿ ಜಲಸಂಪನ್ಮೂಲ ಖಾತೆ ಸಚಿವ ಫಿಲಿಪ್ ನೆರೆ ರೋಡ್ರಿಗ್ರಸ್, ವಿರೋಧಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್, ಗೋವಾ ಫಾರ್ವರ್ಡ್ ಪಕ್ಷದ ವಿಜಯ್ ಸರ್ದೇಸಾಯಿ, ಎಂಜಿಪಿ ನಾಯಕ ಸುದಿನ್ ಧಾವಲಿಕರ್ ಇದ್ದರು. </p>.<p>ಭೇಟಿ ಫಲಪ್ರದವಾಗಿತ್ತು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಹದಾಯಿ, ಕಳಸಾ–ಬಂಡೂರಿ ನಾಲೆಗಳ ತಿರುವು ಯೋಜ ನೆಗೆ ಅನುಮತಿ ನೀಡಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್ಪಿ)ಯು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ)ಗೆ ದೂರು ಸಲ್ಲಿಸಿದೆ.</p>.<p>ಕೇಂದ್ರ ಸರ್ಕಾರವು ಗೋವಾದ ಆಕ್ಷೇಪದ ನಡುವೆಯೂ ಯೋಜನೆಗೆ ಏಕಪಕ್ಷೀಯವಾಗಿ ಅನುಮತಿ ನೀಡಿರು ವುದು ಸರಿಯಲ್ಲ ಎಂದು ಪಕ್ಷದ ಅಧ್ಯಕ್ಷ ವಿಜಯ್ ಸರದೇಸಾಯಿ ಸೋಮವಾರ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಕರ್ನಾಟಕದಲ್ಲಿ ನಡೆಯಲಿರುವ ಉಪ ಚುನಾವಣೆಯನ್ನು ದೃಷ್ಟಿಯಲ್ಲಿ ಇರಿಸಿಕೊಂಡೇ ಕೇಂದ್ರವು ಪರಿಸರ ಇಲಾಖೆಯ ಅನುಮತಿ ನೀಡಿದೆ. ಪರಿಸರಕ್ಕೆ ಧಕ್ಕೆ ಉಂಟು ಮಾಡಬಲ್ಲ ಯೋಜನೆಯನ್ನು ವಿರೋಧಿಸಿ ಗೋವಾ ನಡೆಸಿರುವ ಹೋರಾಟ ಲೆಕ್ಕಿಸದ ಕೇಂದ್ರ ಸರ್ಕಾರ ಕರ್ನಾಟಕದ ಪರವಾಗಿ ನಿಲ್ಲಲು ಮುಂದಾಗಿದೆ ಎಂದು ಅವರು ಆರೋಪಿಸಿದ್ದಾರೆ.</p>.<p>ಮಹದಾಯಿ ನದಿ ಹರಿದಿರುವ ಪಶ್ಚಿಮಘಟ್ಟದ ಪರಿಸರಕ್ಕೆ ಈ ಯೋಜನೆ ಯಿಂದಾಗಿ ತೀವ್ರ ಧಕ್ಕೆಯಾಗಲಿದೆ ಎಂದೂ ಅವರು ಎನ್ಜಿಟಿಗೆ ಸಲ್ಲಿಸಿರುವ ದೂರಿನಲ್ಲಿ ವಿವರಿಸಿದ್ದಾರೆ.</p>.<p><strong>ಸಚಿವ ಜಾವಡೇಕರ್ ಭೇಟಿ ಮಾಡಿದ ಗೋವಾ ನಿಯೋಗ</strong><br /><strong>ಪಣಜಿ</strong>: ಕಳಸಾ ಬಂಡೂರಿ ಯೋಜನೆಗೆ ಪರಿಸರ ಇಲಾಖೆ ಅನುಮೋದನೆ ನೀಡಿದೆ ಎಂಬ ಹಿನ್ನೆಲೆಯಲ್ಲಿ ಆತಂಕ ವ್ಯಕ್ತಪಡಿಸಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ಸರ್ವಪಕ್ಷಗಳ ನಿಯೋಗ ಸೋಮವಾರ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.</p>.<p>ದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿದ್ದ ನಿಯೋಗದಲ್ಲಿ ಜಲಸಂಪನ್ಮೂಲ ಖಾತೆ ಸಚಿವ ಫಿಲಿಪ್ ನೆರೆ ರೋಡ್ರಿಗ್ರಸ್, ವಿರೋಧಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್, ಗೋವಾ ಫಾರ್ವರ್ಡ್ ಪಕ್ಷದ ವಿಜಯ್ ಸರ್ದೇಸಾಯಿ, ಎಂಜಿಪಿ ನಾಯಕ ಸುದಿನ್ ಧಾವಲಿಕರ್ ಇದ್ದರು. </p>.<p>ಭೇಟಿ ಫಲಪ್ರದವಾಗಿತ್ತು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>