ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಗುರುವಾರ ಶ್ರೀ ಅರಬಿಂದೋ ವೈದ್ಯಕೀಯ ವಿಜ್ಞಾನ ಸಂಸ್ಥೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಅವರ ಸ್ಥಿತಿ ಗಂಭೀರವಾಗಿದ್ದರಿಂದಾಗಿ ಕೃತಕ ಉಸಿರಾಟ ವ್ಯವಸ್ಥೆ ಮಾಡಿ ಕಷ್ಟಪಟ್ಟು ಪ್ರಯತ್ನಿಸಿದ್ದೆವು. ಆದರೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಅವರು ಶನಿವಾರ ನಿಧನರಾದರು ಎಂದು ಆಸ್ಪತ್ರೆಯ ಎದೆ ರೋಗ ವಿಭಾಗದ ಮುಖ್ಯಸ್ಥ ಡಾ. ರವಿ ದೋಸಿ ತಿಳಿಸಿದ್ದಾರೆ.