‘ಪ್ರವಾಹದಿಂದ ಅತಿಹೆಚ್ಚು ಹಾನಿಗೀಡಾಗಿರುವ ಜಿಲ್ಲೆ ಬಾರಪೇಟಾ ಆಗಿದ್ದು, ಇಲ್ಲಿ 7.35 ಲಕ್ಷ ಜನರು ಸಂಕಷ್ಟದಕ್ಕೆ ಸಿಲುಕಿದ್ದಾರೆ. ಮಾರಿಗಾಂವ್ನಲ್ಲಿ 3.50 ಲಕ್ಷ, ಧುಬ್ರಿಯಲ್ಲಿ 3.38 ಲಕ್ಷ ಜನರು ತೊಂದರೆಗೀಡಾಗಿದ್ದಾರೆ. ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದ ಶೇ 70 ಭಾಗ ಹಾನಿಗೊಳಗಾಗಿದೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಮಂಡಳಿ ತಿಳಿಸಿದೆ.