‘ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಭೋಲಾ ಶಂಕರ್ ಹೆಸರಿನ ರೋಗಿ ಭಾನುವಾರ ಆಸ್ಪತ್ರೆಗೆ ಬಂದಿದ್ದರು. ಅವರನ್ನು ಹಲವು ಪರೀಕ್ಷೆಗಳಿಗೆ ಒಳಪಡಿಸಿದೆವು. ರೋಗಿಯಎಕ್ಸ್ರೇ ನೋಡಿದಾಗಲೇ ನನಗೆ ಅನುಮಾನ ಬಂದಿತ್ತು. ಕೂಡಲೇ ಸಿ.ಟಿ ಸ್ಕ್ಯಾನ್ ಮಾಡಿಸಲು ತಿಳಿಸಿದ್ದೆ. ಅದರಲ್ಲಿ ನನ್ನ ಅನುಮಾನ ನಿಜವಾಯಿತು. ಸೋಮವಾರವೇ ಶಸ್ತ್ರಚಿಕಿತ್ಸೆ ಮಾಡಿದೆವು. ಇದೀಗರೋಗಿಯ ಆರೋಗ್ಯ ಸಹಜ ಸ್ಥಿತಿಗೆ ಬಂದಿದ್ದು, ಮಾತನಾಡುತ್ತಿದ್ದಾರೆ’ ಎಂದು ಅವರು ತಿಳಿಸಿದರು.