ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ| ದಿನಸಿ ಸಾಮಾಗ್ರಿ ಖರೀದಿಸಲು ಹೋಗಿದ್ದ  ಮಹಿಳಾ ವೈದ್ಯರ ಮೇಲೆ ಹಲ್ಲೆ

Last Updated 9 ಏಪ್ರಿಲ್ 2020, 5:44 IST
ಅಕ್ಷರ ಗಾತ್ರ

ನವದೆಹಲಿ: ದಕ್ಷಿಣ ದೆಹಲಿಯ ಸಫ್ದಾರ್‌ಗಂಜ್ ಆಸ್ಪತ್ರೆಯ ಇಬ್ಬರು ಮಹಿಳಾ ವೈದ್ಯರು ದಿನಸಿ ಸಾಮಾಗ್ರಿ ಖರೀದಿಗಾಗಿ ಹೊರಗೆ ಹೋದಾಗ ಅವರ ಮೇಲೆ ಹಲ್ಲೆ ನಡೆದ ಘಟನೆ ವರದಿಯಾಗಿದೆ.

ಮಹಿಳಾ ವೈದರು ಬುಧವಾರ ಸಂಜೆ ಮನೆ ಬಳಿ ಇರುವ ಗೌತಮ್ ನಗರದ ಮಾರುಕಟ್ಟೆಗೆ ಹೋಗಿದ್ದರು. ಆಗ ಅಲ್ಲಿದ್ದ ವ್ಯಕ್ತಿಯೊಬ್ಬ ವೈದ್ಯರುಮನೆಯಿಂದ ಹೊರಗೆ ಯಾಕೆ ಬಂದಿದ್ದೀರಿ?ವೈದ್ಯರಿಂದ ಕೊರೊನಾ ವೈರಸ್ ಹರಡುತ್ತದೆ ಎಂದು ಹೇಳಿಹಲ್ಲೆ ನಡೆಸಿದ್ದಾನೆ.

ಹಲ್ಲೆಗೊಳಗಾದ ವೈದ್ಯರು ಪೊಲೀಸರಿಗೆ ಕರೆ ಮಾಡಿದ್ದು, ಪೊಲೀಸರು ಬರುವ ಹೊತ್ತಿಗೆ ಆ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ.

ಹಲ್ಲೆ ನಡೆಸಿದ ವ್ಯಕ್ತಿ ಒಳಾಂಗಣ ವಿನ್ಯಾಸಕಾರನಾಗಿದ್ದು, ಆತನನ್ನು ಬುಧವಾರ ರಾತ್ರಿ ಬಂಧಿಸಲಾಗಿದೆ. ವೈದ್ಯರಿಗೆ ಸಫ್ದಾರ್‌ಗಂಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT