ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಭಯಾ ಅತ್ಯಾಚಾರಿ ಪವನ್ ಗುಪ್ತಾ ದಯಾ ಅರ್ಜಿ ತಿರಸ್ಕರಿಸಿದ ರಾಮನಾಥ ಕೋವಿಂದ್

Last Updated 4 ಮಾರ್ಚ್ 2020, 10:42 IST
ಅಕ್ಷರ ಗಾತ್ರ

ನವದೆಹಲಿ:2012ದೆಹಲಿಯಲ್ಲಿ ನಡೆದ ಸಾಮೂಹಿಕಅತ್ಯಾಚಾರ ಪ್ರಕರಣದ ಅಪರಾಧಿ ಪವನ್‌ ಕುಮಾರ್‌ ಗುಪ್ತಾ ಸಲ್ಲಿಸಿದ್ದ ದಯಾ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಬುಧವಾರ ತಿರಸ್ಕರಿಸಿದ್ದಾರೆ.

ಕ್ಷಮಾದಾನ ಅರ್ಜಿ ತಿರಸ್ಕೃತಗೊಂಡಿರುವುದರಿಂದ ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ದಿನಾಂಕ ನಿರ್ಧರಿಸಲು ತಿಹಾರ್ ಜೈಲು ಅಧಿಕಾರಿಗಳು ದೆಹಲಿ ಕೋರ್ಟ್‌ಗೆ ಮೊರೆಹೋಗಲಿದ್ದಾರೆ.

ನಿರ್ಭಯಾ ಪ್ರಕರಣದ ಮೂವರು ಅಪರಾಧಿಗಳ ದಯಾಅರ್ಜಿಯನ್ನು ಕೋವಿಂದ್ ಅವರು ಈ ಹಿಂದೆಯೇ ತಿರಸ್ಕರಿಸಿದ್ದರು . ಇದಾದ ನಂತರ ಮಾರ್ಚ್ 3 ರಂದುಬೆಳಿಗ್ಗೆ ಆರು ಗಂಟೆಗೆ ದೆಹಲಿಯ ತಿಹಾರ್‌ ಜೈಲಿನಲ್ಲಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಜಾರಿ ನಿಗದಿಯಾಗಿತ್ತು. ಈ ನಡುವೆ ಪವನ್ ಗುಪ್ತಾ ಸಲ್ಲಿಸಿದ್ದ ದಯಾ ಅರ್ಜಿ ಬಗ್ಗೆ ರಾಷ್ಟ್ರಪತಿ ತೀರ್ಮಾನ ಬಾಕಿ ಇದ್ದುದರಿಂದ ಮರಣದಂಡನೆ ದಿನಾಂಕ ಮುಂದೂಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT