ಬಿಟ್ಟೂವಿನ ಹತ್ಯೆಯು ಪಂಜಾಬ್ನಲ್ಲಿ ಕೋಮು ಗಲಭೆಗಳಿಗೆ ಇಂಬು ನೀಡುವ ಸಾಧ್ಯತೆಗಳಿವೆ. ಇದೇ ಹಿನ್ನೆಲೆಯಲ್ಲಿ ರಾಜ್ಯದ ಜನರಲ್ಲಿ ಮನವಿ ಮಾಡಿರುವ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಜನತೆ ಶಾಂತಿಯಿಂದ ವರ್ತಿಸಬೇಕು. ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ. ಪ್ರಕರಣದ ತನಿಖೆಗೆ ಆದೇಶಿಸಿರುವ ಅವರು ದಾಳಿಕೋರರಿಗೆ ಕಠಿಣ ಶಿಕ್ಷೆ ಕೊಡಿಸುವ ಭರವಸೆ ನೀಡಿದ್ದಾರೆ. ಇದೇ ವೇಳೆ, ಇಬ್ಬರು ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಿದೆ.