ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಣಿಯಲು ವಿರೋಧ ಪಕ್ಷಗಳನ್ನೊಳಗೊಂಡ ಮಹಾಮೈತ್ರಿ ರಚಿಸುವ ಕಾಂಗ್ರೆಸ್ ಪ್ರಯತ್ನದ ನಿಟ್ಟಿನಲ್ಲಿ ಚಿದಂಬರಂ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಬಹುಜನ ಸಮಾಜ ಪಾರ್ಟಿ ಮುಖ್ಯಸ್ಥೆ ಮಾಯಾವತಿ ಅವರು ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಹೋರಾಟದಲ್ಲಿ ರಾಹುಲ್ ಗಾಂಧಿ ಅವರನ್ನು ಕಡೆಗಣಿಸುವ ಸಾಧ್ಯತೆ ಇರುವುದರಿಂದ ಚಿದಂಬರಂ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.