‘ಕದನ ವಿರಾಮ ಉಲ್ಲಂಘನೆ, ಭಯೋತ್ಪಾದಕರಿಗೆ ಬೆಂಬಲ ನೀಡುವುದು ಮತ್ತು ಭಯೋತ್ಪಾದಕರ ನುಸುಳುವಿಕೆಯ ಬಗ್ಗೆ ನಮ್ಮ ಆತಂಕವನ್ನು ಪಾಕಿಸ್ತಾನದ ಮುಂದೆ ವ್ಯಕ್ತಪಡಿಸಿದ್ದೇವೆ. 2003ರ ಕದನ ವಿರಾಮ ಒಪ್ಪಂದಕ್ಕೆ ಬದ್ಧರಾಗಿ, ಶಾಂತಿ ಕಾಪಾಡಲು ಸಹಕರಿಸುವಂತೆ ಹಲವು ಬಾರಿ ಪಾಕಿಸ್ತಾನಕ್ಕೆ ಮನವಿ ಮಾಡಿದ್ದೇವೆ. ಭಾರತೀಯ ಸೇನೆಯು ಹೆಚ್ಚು ತಾಳ್ಮೆ ವಹಿಸಿದೆ. ಅಪ್ರಚೋದಿತ ದಾಳಿ ಮತ್ತು ಗಡಿಯಾಚೆಯಿಂದ ಭಯೋತ್ಪಾದಕರ ನುಸುಳುವಿಕೆಯ ಪ್ರಯತ್ನಗಳಿಗೆ ಮಾತ್ರ ಪ್ರತ್ಯುತ್ತರ ನೀಡಿದ್ದೇವೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.