ಉಗ್ರರು ಗಡಿ ದಾಟಲು ಸಹಕರಿಸುತ್ತಿರುವುದು, ಭಾರತೀಯ ನಾಗರಿಕರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿರುವುದು ಹಾಗೂ ಸರಹದ್ದು ಚೌಕಗಳ ಮೇಲೆ ದಾಳಿಗಳು ಸೇರಿದಂತೆ ಕದನ ವಿರಾಮ ಉಲ್ಲಂಘನೆಯ ಮೂಲಕ ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸಿರುವುದರ ಬಗ್ಗೆ ನಮ್ಮ ಕಳವಳ ವ್ಯಕ್ತಪಡಿಸಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.