<p><strong>ನವದೆಹಲಿ</strong> : ಏಪ್ರಿಲ್ನಲ್ಲಿ ರಾಜ್ಯಸಭೆಯ 55 ಸ್ಥಾನಗಳು ಖಾಲಿಯಾಗುತ್ತಿದ್ದು, ಈ ಸ್ಥಾನಗಳಿಗೆ ಮಾರ್ಚ್ 26ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.</p>.<p>ಒಟ್ಟು 55 ಸ್ಥಾನಗಳ ಪೈಕಿ, 17 ರಾಜ್ಯಗಳ 51 ಸಂಸದರ ಅವಧಿ ಏಪ್ರಿಲ್ನಲ್ಲಿ ಮುಕ್ತಾಯವಾಗಲಿದೆ. ಇನ್ನುಳಿದ ನಾಲ್ವರು ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅವರ ಅವಧಿಯೂ ಇದೇ ಏಪ್ರಿಲ್ಗೆ ಕೊನೆಯಾಗಲಿದೆ.</p>.<p>ಮಾರ್ಚ್ 6ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ಮಾರ್ಚ್ 13 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮತದಾನ ಮುಕ್ತಾಯವಾದ ಒಂದು ಗಂಟೆಯ ಬಳಿಕ ಮಾರ್ಚ್ 26ರ ಸಂಜೆ ಮತ ಎಣಿಕೆ ಕಾರ್ಯ ನಡೆಯಲಿದೆ.</p>.<p>ಏಪ್ರಿಲ್ನಲ್ಲಿ ಅವಧಿ ಮುಗಿಯಲಿರುವ ರಾಜ್ಯಸಭಾ ಸದಸ್ಯರ ಪೈಕಿ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ (ಜೆಡಿಯು), ಕೇಂದ್ರ ಸಚಿವ ರಾಮ್ದಾಸ್ ಅಠವಳೆ (ಆರ್ಪಿಐ– ಅಠವಳೆ), ಕಾಂಗ್ರೆಸ್ ನಾಯಕ ಮೋತಿಲಾಲ್ ವೋರಾ, ಕೇಂದ್ರದ ಮಾಜಿ ಸಚಿವರಾದ ವಿಜಯ್ ಗೋಯೆಲ್ (ಬಿಜೆಪಿ), ಕುಮಾರಿ ಶೈಲ್ಜಾ (ಕಾಂಗ್ರೆಸ್), ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಪ್ರಮುಖರು.</p>.<p>ಮಹಾರಾಷ್ಟ್ರದಿಂದ 7, ತಮಿಳುನಾಡಿನಿಂದ 6, ಪಶ್ಚಿಮ ಬಂಗಾಳ ಮತ್ತು ಬಿಹಾರದಿಂದ ತಲಾ 5, ಒಡಿಶಾ, ಗುಜರಾತ್ ಮತ್ತು ಆಂಧ್ರದಿಂದ ತಲಾ 4, ಅಸ್ಸಾಂ, ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಿಂದ ತಲಾ 3, ತೆಲಂಗಾಣ, ಛತ್ತೀಸಗಡ, ಹರಿಯಾಣ ಮತ್ತು ಜಾರ್ಖಂಡ್ನಿಂದ ತಲಾ 2, ಹಿಮಾಚಲ ಪ್ರದೇಶ, ಮಣಿಪುರ ಮತ್ತು ಮೇಘಾಲಯದಿಂದ ತಲಾ ಒಂದೊಂದು ಸ್ಥಾನಗಳು ಖಾಲಿಯಾಗಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong> : ಏಪ್ರಿಲ್ನಲ್ಲಿ ರಾಜ್ಯಸಭೆಯ 55 ಸ್ಥಾನಗಳು ಖಾಲಿಯಾಗುತ್ತಿದ್ದು, ಈ ಸ್ಥಾನಗಳಿಗೆ ಮಾರ್ಚ್ 26ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.</p>.<p>ಒಟ್ಟು 55 ಸ್ಥಾನಗಳ ಪೈಕಿ, 17 ರಾಜ್ಯಗಳ 51 ಸಂಸದರ ಅವಧಿ ಏಪ್ರಿಲ್ನಲ್ಲಿ ಮುಕ್ತಾಯವಾಗಲಿದೆ. ಇನ್ನುಳಿದ ನಾಲ್ವರು ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅವರ ಅವಧಿಯೂ ಇದೇ ಏಪ್ರಿಲ್ಗೆ ಕೊನೆಯಾಗಲಿದೆ.</p>.<p>ಮಾರ್ಚ್ 6ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ಮಾರ್ಚ್ 13 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮತದಾನ ಮುಕ್ತಾಯವಾದ ಒಂದು ಗಂಟೆಯ ಬಳಿಕ ಮಾರ್ಚ್ 26ರ ಸಂಜೆ ಮತ ಎಣಿಕೆ ಕಾರ್ಯ ನಡೆಯಲಿದೆ.</p>.<p>ಏಪ್ರಿಲ್ನಲ್ಲಿ ಅವಧಿ ಮುಗಿಯಲಿರುವ ರಾಜ್ಯಸಭಾ ಸದಸ್ಯರ ಪೈಕಿ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ (ಜೆಡಿಯು), ಕೇಂದ್ರ ಸಚಿವ ರಾಮ್ದಾಸ್ ಅಠವಳೆ (ಆರ್ಪಿಐ– ಅಠವಳೆ), ಕಾಂಗ್ರೆಸ್ ನಾಯಕ ಮೋತಿಲಾಲ್ ವೋರಾ, ಕೇಂದ್ರದ ಮಾಜಿ ಸಚಿವರಾದ ವಿಜಯ್ ಗೋಯೆಲ್ (ಬಿಜೆಪಿ), ಕುಮಾರಿ ಶೈಲ್ಜಾ (ಕಾಂಗ್ರೆಸ್), ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಪ್ರಮುಖರು.</p>.<p>ಮಹಾರಾಷ್ಟ್ರದಿಂದ 7, ತಮಿಳುನಾಡಿನಿಂದ 6, ಪಶ್ಚಿಮ ಬಂಗಾಳ ಮತ್ತು ಬಿಹಾರದಿಂದ ತಲಾ 5, ಒಡಿಶಾ, ಗುಜರಾತ್ ಮತ್ತು ಆಂಧ್ರದಿಂದ ತಲಾ 4, ಅಸ್ಸಾಂ, ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಿಂದ ತಲಾ 3, ತೆಲಂಗಾಣ, ಛತ್ತೀಸಗಡ, ಹರಿಯಾಣ ಮತ್ತು ಜಾರ್ಖಂಡ್ನಿಂದ ತಲಾ 2, ಹಿಮಾಚಲ ಪ್ರದೇಶ, ಮಣಿಪುರ ಮತ್ತು ಮೇಘಾಲಯದಿಂದ ತಲಾ ಒಂದೊಂದು ಸ್ಥಾನಗಳು ಖಾಲಿಯಾಗಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>