<p><strong>ಪಟ್ನಾ/ಲಖನೌ:</strong><a href="https://www.prajavani.net/tags/bihar" target="_blank">ಬಿಹಾರ</a>ದಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ <a href="https://www.prajavani.net/tags/rain" target="_blank">ಮಳೆ</a>, ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ ಸೋಮವಾರ 29ಕ್ಕೆ ಏರಿಕೆಯಾಗಿದೆ.</p>.<p>ರಾಜಧಾನಿ ಪಟ್ನಾವೂ ಸೇರಿದಂತೆರಾಜ್ಯದಾದ್ಯಂತ ಇಂದೂ ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಶಾಲೆ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ನೆರೆ ರಾಜ್ಯ ಉತ್ತರ ಪ್ರದೇಶದಲ್ಲಿಯೂ ಮಳೆ ಸಂಬಂಧಿತ ಹಾನಿ ಹೆಚ್ಚಾಗಿದ್ದು, ಕಳೆದ ಐದು ದಿನಗಳಲ್ಲಿ 87 ಜನ ಮೃತಪಟ್ಟಿದ್ದಾರೆ.</p>.<p>ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಐಷಾರಾಮಿ ಕಾಲೊನಿ ರಾಜೇಂದ್ರ ನಗರ ಸೇರಿದಂತೆ ಪಟ್ನಾದ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸೋಮವಾರ ಬೆಳಿಗ್ಗೆ ಪರಿಶೀಲನೆ ನಡೆಸಿದ್ದು ರಕ್ಷಣೆ, ಪರಿಹಾರ ಕಾರ್ಯಗಳಿಗೆ ಸಲಹೆ ಸೂಚನೆ ನೀಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/bihar-heavy-rain-and-flood-668466.html" target="_blank">ಬಿಹಾರ: ಭಾರಿ ಮಳೆ, ಪ್ರವಾಹಕ್ಕೆ ತತ್ತರ, 4 ದಿನಗಳಲ್ಲಿ 17 ಜನರ ಸಾವು</a></p>.<p>ರಕ್ಷಣಾ ಕಾರ್ಯಾಚರಣೆ, ಪರಿಹಾರ ಸಾಮಗ್ರಿ ವಿತರಣೆಗಾಗಿ ಎರಡು ಹೆಲಿಕಾಪ್ಟರ್ಗಳನ್ನು ಒದಗಿಸುವಂತೆ ಭಾರತೀಯ ವಾಯುಪಡೆಗೆ ಬಿಹಾರ ಸರ್ಕಾರ ಮನವಿ ಮಾಡಿದೆ.</p>.<p>ಪ್ರವಾಹಪೀಡಿತ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) 19 ತಂಡಗಳನ್ನು ನಿಯೋಜನೆ ಮಾಡಲಾಗಿದೆ.</p>.<p>ಉತ್ತರ ಪ್ರದೇಶದ ಬಲಿಯಾ, ವಾರಾಣಸಿ, ಜಾನ್ಪುರ ಜಿಲ್ಲೆಗಳಲ್ಲಿಯೂ ಮಳೆ, ಪ್ರವಾಹದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಾಲಿಯಾದ ಜಿಲ್ಲಾ ಕಾರಾಗೃಹಕ್ಕೆ ನೀರುನುಗ್ಗಿದ ಕಾರಣ 500 ಕೈದಿಗಳನ್ನು ಮತ್ತೊಂದು ಜೈಲಿಗೆ ಸ್ಥಳಾಂತರಿಸಲಾಗಿದೆ.</p>.<p>ಉತ್ತರ ಪ್ರದೇಶ ಮತ್ತು ಬಿಹಾರಗಳಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಕೇಂದ್ರ ಗೃಹ ಸಚಿವಾಲಯ ಅವಲೋಕಿಸುತ್ತಿದೆ. ಎಲ್ಲ ನೆರವನ್ನೂ ನೀಡಲಾಗುವುದು ಎಂದು ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ.</p>.<p>ಮುಂಬೈ–ಲಖನೌ ಮತ್ತು ದೆಹಲಿ–ವಾರಾಣಸಿ ನಡುವಣ ವಿಮಾನ ಹಾರಾಟದಲ್ಲೂ ವ್ಯತ್ಯಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ/ಲಖನೌ:</strong><a href="https://www.prajavani.net/tags/bihar" target="_blank">ಬಿಹಾರ</a>ದಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ <a href="https://www.prajavani.net/tags/rain" target="_blank">ಮಳೆ</a>, ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ ಸೋಮವಾರ 29ಕ್ಕೆ ಏರಿಕೆಯಾಗಿದೆ.</p>.<p>ರಾಜಧಾನಿ ಪಟ್ನಾವೂ ಸೇರಿದಂತೆರಾಜ್ಯದಾದ್ಯಂತ ಇಂದೂ ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಶಾಲೆ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ನೆರೆ ರಾಜ್ಯ ಉತ್ತರ ಪ್ರದೇಶದಲ್ಲಿಯೂ ಮಳೆ ಸಂಬಂಧಿತ ಹಾನಿ ಹೆಚ್ಚಾಗಿದ್ದು, ಕಳೆದ ಐದು ದಿನಗಳಲ್ಲಿ 87 ಜನ ಮೃತಪಟ್ಟಿದ್ದಾರೆ.</p>.<p>ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಐಷಾರಾಮಿ ಕಾಲೊನಿ ರಾಜೇಂದ್ರ ನಗರ ಸೇರಿದಂತೆ ಪಟ್ನಾದ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸೋಮವಾರ ಬೆಳಿಗ್ಗೆ ಪರಿಶೀಲನೆ ನಡೆಸಿದ್ದು ರಕ್ಷಣೆ, ಪರಿಹಾರ ಕಾರ್ಯಗಳಿಗೆ ಸಲಹೆ ಸೂಚನೆ ನೀಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/bihar-heavy-rain-and-flood-668466.html" target="_blank">ಬಿಹಾರ: ಭಾರಿ ಮಳೆ, ಪ್ರವಾಹಕ್ಕೆ ತತ್ತರ, 4 ದಿನಗಳಲ್ಲಿ 17 ಜನರ ಸಾವು</a></p>.<p>ರಕ್ಷಣಾ ಕಾರ್ಯಾಚರಣೆ, ಪರಿಹಾರ ಸಾಮಗ್ರಿ ವಿತರಣೆಗಾಗಿ ಎರಡು ಹೆಲಿಕಾಪ್ಟರ್ಗಳನ್ನು ಒದಗಿಸುವಂತೆ ಭಾರತೀಯ ವಾಯುಪಡೆಗೆ ಬಿಹಾರ ಸರ್ಕಾರ ಮನವಿ ಮಾಡಿದೆ.</p>.<p>ಪ್ರವಾಹಪೀಡಿತ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) 19 ತಂಡಗಳನ್ನು ನಿಯೋಜನೆ ಮಾಡಲಾಗಿದೆ.</p>.<p>ಉತ್ತರ ಪ್ರದೇಶದ ಬಲಿಯಾ, ವಾರಾಣಸಿ, ಜಾನ್ಪುರ ಜಿಲ್ಲೆಗಳಲ್ಲಿಯೂ ಮಳೆ, ಪ್ರವಾಹದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಾಲಿಯಾದ ಜಿಲ್ಲಾ ಕಾರಾಗೃಹಕ್ಕೆ ನೀರುನುಗ್ಗಿದ ಕಾರಣ 500 ಕೈದಿಗಳನ್ನು ಮತ್ತೊಂದು ಜೈಲಿಗೆ ಸ್ಥಳಾಂತರಿಸಲಾಗಿದೆ.</p>.<p>ಉತ್ತರ ಪ್ರದೇಶ ಮತ್ತು ಬಿಹಾರಗಳಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಕೇಂದ್ರ ಗೃಹ ಸಚಿವಾಲಯ ಅವಲೋಕಿಸುತ್ತಿದೆ. ಎಲ್ಲ ನೆರವನ್ನೂ ನೀಡಲಾಗುವುದು ಎಂದು ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ.</p>.<p>ಮುಂಬೈ–ಲಖನೌ ಮತ್ತು ದೆಹಲಿ–ವಾರಾಣಸಿ ನಡುವಣ ವಿಮಾನ ಹಾರಾಟದಲ್ಲೂ ವ್ಯತ್ಯಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>