<p><strong>ನವದೆಹಲಿ:</strong>ಬಸ್ ಹಳ್ಳಕ್ಕೆ ಉರುಳಿ 29 ಜನರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಯಮುನಾ ಎಕ್ಸ್ಪ್ರೆಸ್ವೇ ಹೆದ್ದಾರಿಯಲ್ಲಿ ಸೋಮವಾರ ನಸುಕಿನಲ್ಲಿ ಸಂಭವಿಸಿದೆ. ಬಸ್ನಲ್ಲಿದ್ದ 20 ಮಂದಿಯನ್ನು ರಕ್ಷಿಸಲಾಗಿದೆ. ಚಾಲಕನನ್ನು ನಿದ್ದೆಯ ಮಂಪರು ಆವರಸಿದ್ದೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳನ್ನು ಉಲ್ಲೇಖಿಸಿ <a href="https://www.ndtv.com/india-news/29-dead-after-passenger-bus-going-from-lucknow-to-delhi-skids-off-yamuna-expressway-2065815?pfrom=home-topscroll" target="_blank">ಎನ್ಡಿಟಿವಿ</a> ಜಾಲತಾಣವರದಿ ಮಾಡಿದೆ.</p>.<p>ಯಮುನಾ ಎಕ್ಸ್ಪ್ರೆಸ್ವೇ ಮಾರ್ಗದಲ್ಲಿ ಉತ್ತರ ಪ್ರದೇಶ ರಾಜಧಾನಿ ಲಖನೌನಿಂದ ದೆಹಲಿಗೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಹಳ್ಳಕ್ಕೆ ಉರುಳಿಬಿತ್ತು. 6 ಮಾರ್ಗಗಳ ಯಮುನಾ ಎಕ್ಸ್ಪ್ರೆಸ್ವೇ ನೊಯ್ಡಾದಿಂದ ಆಗ್ರಾ ಸಂಪರ್ಕಿಸುತ್ತದೆ.</p>.<p>‘ಸ್ಲೀಪರ್ ಕೋಚ್ ಬಸ್ 15 ಅಡಿ ಆಳದಹಳ್ಳಕ್ಕೆ ಉರುಳಿದೆ. ಈವರೆಗೆ 20 ಪ್ರಯಾಣಿಕರನ್ನು ಮಾತ್ರ ರಕ್ಷಿಸಲು ಸಾಧ್ಯವಾಗಿದೆ. ರಕ್ಷಣಾ ಕಾರ್ಯಗಳು ಪ್ರಗತಿಯಲ್ಲಿವೆ’ ಎಂದು ಉತ್ತರ ಪ್ರದೇಶ ಪೊಲೀಸರು ಟ್ವೀಟ್ ಮಾಡಿದ್ದಾರೆ.</p>.<p>ಅಪಘಾತಕ್ಕೀಡಾದ ಬಸ್ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅವಧ್ ಡಿಪೊಗೆ ಸೇರಿದ್ದಾಗಿದೆ. ಡಬಲ್ ಡೆಕರ್ ಬಸ್ ಹಳ್ಳಕ್ಕೆ ಉರುಳಿದಾಗ ಒಟ್ಟು 50 ಮಂದಿ ಪ್ರಯಾಣಿಕರಿದ್ದರು. ಸಾರಿಗೆ ಸಂಸ್ಥೆಯು ಮೃತರಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಬಸ್ ಹಳ್ಳಕ್ಕೆ ಉರುಳಿ 29 ಜನರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಯಮುನಾ ಎಕ್ಸ್ಪ್ರೆಸ್ವೇ ಹೆದ್ದಾರಿಯಲ್ಲಿ ಸೋಮವಾರ ನಸುಕಿನಲ್ಲಿ ಸಂಭವಿಸಿದೆ. ಬಸ್ನಲ್ಲಿದ್ದ 20 ಮಂದಿಯನ್ನು ರಕ್ಷಿಸಲಾಗಿದೆ. ಚಾಲಕನನ್ನು ನಿದ್ದೆಯ ಮಂಪರು ಆವರಸಿದ್ದೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳನ್ನು ಉಲ್ಲೇಖಿಸಿ <a href="https://www.ndtv.com/india-news/29-dead-after-passenger-bus-going-from-lucknow-to-delhi-skids-off-yamuna-expressway-2065815?pfrom=home-topscroll" target="_blank">ಎನ್ಡಿಟಿವಿ</a> ಜಾಲತಾಣವರದಿ ಮಾಡಿದೆ.</p>.<p>ಯಮುನಾ ಎಕ್ಸ್ಪ್ರೆಸ್ವೇ ಮಾರ್ಗದಲ್ಲಿ ಉತ್ತರ ಪ್ರದೇಶ ರಾಜಧಾನಿ ಲಖನೌನಿಂದ ದೆಹಲಿಗೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಹಳ್ಳಕ್ಕೆ ಉರುಳಿಬಿತ್ತು. 6 ಮಾರ್ಗಗಳ ಯಮುನಾ ಎಕ್ಸ್ಪ್ರೆಸ್ವೇ ನೊಯ್ಡಾದಿಂದ ಆಗ್ರಾ ಸಂಪರ್ಕಿಸುತ್ತದೆ.</p>.<p>‘ಸ್ಲೀಪರ್ ಕೋಚ್ ಬಸ್ 15 ಅಡಿ ಆಳದಹಳ್ಳಕ್ಕೆ ಉರುಳಿದೆ. ಈವರೆಗೆ 20 ಪ್ರಯಾಣಿಕರನ್ನು ಮಾತ್ರ ರಕ್ಷಿಸಲು ಸಾಧ್ಯವಾಗಿದೆ. ರಕ್ಷಣಾ ಕಾರ್ಯಗಳು ಪ್ರಗತಿಯಲ್ಲಿವೆ’ ಎಂದು ಉತ್ತರ ಪ್ರದೇಶ ಪೊಲೀಸರು ಟ್ವೀಟ್ ಮಾಡಿದ್ದಾರೆ.</p>.<p>ಅಪಘಾತಕ್ಕೀಡಾದ ಬಸ್ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅವಧ್ ಡಿಪೊಗೆ ಸೇರಿದ್ದಾಗಿದೆ. ಡಬಲ್ ಡೆಕರ್ ಬಸ್ ಹಳ್ಳಕ್ಕೆ ಉರುಳಿದಾಗ ಒಟ್ಟು 50 ಮಂದಿ ಪ್ರಯಾಣಿಕರಿದ್ದರು. ಸಾರಿಗೆ ಸಂಸ್ಥೆಯು ಮೃತರಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>