ತನಿಖೆಗೆ ಸೂಚನೆ: ಅಪಘಾತಕ್ಕೆ ಕಾರಣವೇನು ಎಂಬುದರ ಪತ್ತೆಗಾಗಿ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನಿರ್ದೇಶಿಸಿದ್ದಾರೆ. 24 ಗಂಟೆಯೊಳಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ತನಿಖೆಗೆ ಸಾರಿಗೆ ಆಯುಕ್ತ, ವಿಭಾಗೀಯ ಆಯುಕ್ತ ಹಾಗೂ ಪೊಲೀಸ್ ಮಹಾನಿರೀಕ್ಷಕರನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಇಂಥ ಅಪಘಾತಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಶಿಫಾರಸುಗಳನ್ನು ಸಹ ತಿಳಿಸಬೇಕು ಎಂದು ಸಮಿತಿಗೆ ಸೂಚಿಸಲಾಗಿದೆ.