ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಲೋಹ ವಿಗ್ರಹ ಕಳವು: ಮೂವರ ಸೆರೆ

Last Updated 23 ನವೆಂಬರ್ 2018, 18:56 IST
ಅಕ್ಷರ ಗಾತ್ರ

ಹೈದರಾಬಾದ್‌: ತೆಲಂಗಾಣದ ಮಹಬೂಬಾಬಾದ್‌ ಜಿಲ್ಲೆಯ ದೇವಾಲಯದಿಂದ 12 ಪುರಾತನ ಪಂಚಲೋಹ ವಿಗ್ರಹಗಳನ್ನು ಕಳವುಗೈದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಎಲ್‌. ರಾಮ್‌, ಕೆ.ಸಂತೋಷ್‌ ಮತ್ತು ವಿ. ಜಾನ್‌ ಬಂಧಿತರು. ಇವರಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ₹3 ಕೋಟಿ ಬೆಳೆಬಾಳುವ ವಿಗ್ರಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಕತೀಯರ ಕಾಲಕ್ಕೆ ಸೇರಿದ್ದು ಎನ್ನಲಾದ ಶ್ರೀರಾಮ, ಸೀತೆ, ಲಕ್ಷಣ ಹಾಗೂ ಇತರ 9 ವಿಗ್ರಹಗಳನ್ನು ವಶಪಡಿಸಿಕೊಂಡಿದ್ದು, ಇವುಗಳನ್ನು ರಾಮಾಲಯಂ ದೇವಾಲಯದಿಂದ ಕಳವುಗೈದಿರಬಹುದು ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT