<p class="bodytext"><strong>ರಾಯಪುರ</strong>: ಛತ್ತೀಸ್ಗಡದ ದಾಂತೇವಾಡ ಜಿಲ್ಲೆಯಲ್ಲಿ ನಕ್ಸಲೀಯರು ಗುರುವಾರ ಬಸ್ನಲ್ಲಿ ಕಚ್ಚಾ ಬಾಂಬ್ ಸ್ಫೋಟಿಸಿದ್ದು, ಮೂವರು ನಾಗರಿಕರು ಮತ್ತು ಒಬ್ಬ ಯೋಧ ಬಲಿಯಾಗಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಈ ಕೃತ್ಯ ನಡೆದಿದೆ.</p>.<p class="bodytext">ಸ್ಫೋಟದಿಂದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ದಾಂತೇವಾಡದ ಎಸ್ಪಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.</p>.<p class="bodytext">ಯೋಧರು ಮಾರುಕಟ್ಟೆಯಲ್ಲಿ ದಿನಸಿ ಸಾಮಾನುಗಳನ್ನು ಖರೀದಿಸಿ ಬಸ್ನಲ್ಲಿ ತಮ್ಮ ಕ್ಯಾಂಪ್ಗೆ ವಾಪಸಾಗುತ್ತಿದ್ದಾಗ ಬಚೇಲಿಯ ಗುಡ್ಡಗಾಡು ಪ್ರದೇಶದಲ್ಲಿ ಸ್ಫೋಟ ನಡೆದಿದೆ ಎಂದು ಅವರು ಹೇಳಿದ್ದಾರೆ. ಬಸ್ ಚಾಲಕ, ನಿರ್ವಾಹಕ ಮತ್ತು ಕ್ಲೀನರ್ ಮೃತರಾಗಿದ್ದಾರೆ.</p>.<p class="bodytext">ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿರುವ ಪ್ರದೇಶಗಳಿಗೆ ಈ ಸಿಐಎಸ್ಎಫ್ ಘಟಕವನ್ನು ನಿಯೋಜಿಸಲಾಗಿತ್ತು. ಇದೇ 12 ಮತ್ತು 20ರಂದು ರಾಜ್ಯದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನದಲ್ಲಿ, ನಕ್ಸಲ್ ಪೀಡಿತ ಬಸ್ತಾರ್ ಪ್ರಾಂತ್ಯ ಸಹ ಸೇರಿದೆ.</p>.<p class="bodytext">**</p>.<p class="bodytext"><strong>ಉಗ್ರರ ಅಡಗುತಾಣ ಪತ್ತೆ</strong></p>.<p class="bodytext"><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ಅಡಗುತಾಣವನ್ನು ಪತ್ತೆಹಚ್ಚಿರುವ ಭದ್ರತಾ ಪಡೆಗಳು, ಕಚ್ಚಾ ಬಾಂಬ್ ತಯಾರಿಕೆಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p class="bodytext">ನಿಖರ ಮಾಹಿತಿ ಪಡೆದಿದ್ದ ಪೊಲೀಸ್ ಮತ್ತು ಯೋಧರ ಜಂಟಿ ತಂಡ, ರಾಮಗಿರಿ ಎಂಬಲ್ಲಿ ಈ ಅಡಗುತಾಣವನ್ನು ಪತ್ತೆ ಹಚ್ಚಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ರಾಯಪುರ</strong>: ಛತ್ತೀಸ್ಗಡದ ದಾಂತೇವಾಡ ಜಿಲ್ಲೆಯಲ್ಲಿ ನಕ್ಸಲೀಯರು ಗುರುವಾರ ಬಸ್ನಲ್ಲಿ ಕಚ್ಚಾ ಬಾಂಬ್ ಸ್ಫೋಟಿಸಿದ್ದು, ಮೂವರು ನಾಗರಿಕರು ಮತ್ತು ಒಬ್ಬ ಯೋಧ ಬಲಿಯಾಗಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಈ ಕೃತ್ಯ ನಡೆದಿದೆ.</p>.<p class="bodytext">ಸ್ಫೋಟದಿಂದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ದಾಂತೇವಾಡದ ಎಸ್ಪಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.</p>.<p class="bodytext">ಯೋಧರು ಮಾರುಕಟ್ಟೆಯಲ್ಲಿ ದಿನಸಿ ಸಾಮಾನುಗಳನ್ನು ಖರೀದಿಸಿ ಬಸ್ನಲ್ಲಿ ತಮ್ಮ ಕ್ಯಾಂಪ್ಗೆ ವಾಪಸಾಗುತ್ತಿದ್ದಾಗ ಬಚೇಲಿಯ ಗುಡ್ಡಗಾಡು ಪ್ರದೇಶದಲ್ಲಿ ಸ್ಫೋಟ ನಡೆದಿದೆ ಎಂದು ಅವರು ಹೇಳಿದ್ದಾರೆ. ಬಸ್ ಚಾಲಕ, ನಿರ್ವಾಹಕ ಮತ್ತು ಕ್ಲೀನರ್ ಮೃತರಾಗಿದ್ದಾರೆ.</p>.<p class="bodytext">ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿರುವ ಪ್ರದೇಶಗಳಿಗೆ ಈ ಸಿಐಎಸ್ಎಫ್ ಘಟಕವನ್ನು ನಿಯೋಜಿಸಲಾಗಿತ್ತು. ಇದೇ 12 ಮತ್ತು 20ರಂದು ರಾಜ್ಯದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನದಲ್ಲಿ, ನಕ್ಸಲ್ ಪೀಡಿತ ಬಸ್ತಾರ್ ಪ್ರಾಂತ್ಯ ಸಹ ಸೇರಿದೆ.</p>.<p class="bodytext">**</p>.<p class="bodytext"><strong>ಉಗ್ರರ ಅಡಗುತಾಣ ಪತ್ತೆ</strong></p>.<p class="bodytext"><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ಅಡಗುತಾಣವನ್ನು ಪತ್ತೆಹಚ್ಚಿರುವ ಭದ್ರತಾ ಪಡೆಗಳು, ಕಚ್ಚಾ ಬಾಂಬ್ ತಯಾರಿಕೆಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p class="bodytext">ನಿಖರ ಮಾಹಿತಿ ಪಡೆದಿದ್ದ ಪೊಲೀಸ್ ಮತ್ತು ಯೋಧರ ಜಂಟಿ ತಂಡ, ರಾಮಗಿರಿ ಎಂಬಲ್ಲಿ ಈ ಅಡಗುತಾಣವನ್ನು ಪತ್ತೆ ಹಚ್ಚಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>