ನವದೆಹಲಿ:ಮಾನವಸಹಿತ ಗಗನಯಾನಯೋಜನೆಗೆ ಕೇಂದ್ರದ ಸಚಿವ ಸಂಪುಟ ಸಭೆ ಶುಕ್ರವಾರ ಒಪ್ಪಿಗೆ ನೀಡಿದೆ.ಭಾರತದ ಮೂವರು ಗಗನಯಾನಿಗಳನ್ನು ಬಾಹ್ಯಾಕಾಶಕ್ಕೆಕಳುಹಿಸುವ ಯೋಜನೆ ಇದಾಗಿದೆ.
₹10 ಸಾವಿರ ಕೋಟಿ ವೆಚ್ಚದ ಈ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕೇಂದ್ರದ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಗಗನಯಾನ ಯೋಜನೆ ಅಡಿಯಲ್ಲಿ ಮೂವರು ಗಗನಯಾನಿಗಳನ್ನು ಬಾಹ್ಯಕಾಶಕ್ಕೆ ಕಳುಹಿಸಿಕೊಡಲಾಗುವುದು. ಇವರು 7 ದಿನ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಲಿದ್ದಾರೆ. ಇದಕ್ಕಾಗಿ ಇಸ್ರೋ ವಿಶೇಷ ಬಾಹ್ಯಾಕಾಶ ನೌಕೆಯನ್ನು ಸಿದ್ಧ ಪಡಿಸಲಿದೆ.