ಈ ಮಧ್ಯೆ,ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆಗಾರಿಕೆ ಹೊತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಮತ್ತು ಎಐಸಿಸಿ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಆಗ್ರಹವೂ ಕೇಳಿಬಂದಿದೆ.ಹೈದರಾಬಾದ್ನ ಹಿರಿಯ ಕಾಂಗ್ರೆಸ್ ಮುಖಂಡ ಮರ್ರಿ ಶಶಿಧರ ರೆಡ್ಡಿ, ‘ರಾಜೀನಾಮೆ ಸಲ್ಲಿಸಿ ಕಾರ್ಯಕಾರಿ ಸಮಿತಿ ಪುನರ್ರಚನೆಗೆ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮುಕ್ತ ಅವಕಾಶ ಕಲ್ಪಿಸಬೇಕು’ ಎಂದು ಆಗ್ರಹಿಸಿದ್ದಾರೆ.