ಬುಧವಾರ ಸಂಜೆ ತನ್ನ ಅಜ್ಜ ಮತ್ತು ಅಪ್ಪನೊಂದಿಗೆ ಹೊಲದಲ್ಲಿ ಓಡಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದಾನೆ. ಬಾಲಕನ ಕುಟುಂಬ ಇತ್ತೀಚೆಗಷ್ಟೇ ಹೊಲದಲ್ಲಿ ಮೂರು ಕೊಳವೆಬಾವಿಗಳನ್ನು ಕೊರೆಸಿತ್ತು. ಆದರೆ, ಒಂದರಲ್ಲಿಯೂ ನೀರು ಸಿಕ್ಕಿರಲಿಲ್ಲ. ವಿಫಲವಾದ ಕೊಳವೆಬಾವಿಗಳನ್ನು ಮುಚ್ಚದೇ ಇದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.