ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್ ಪಲ್ಟಿ- 18 ಮಂದಿಗೆ ಗಾಯ

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಬಸ್‌
Last Updated 29 ಮೇ 2018, 19:30 IST
ಅಕ್ಷರ ಗಾತ್ರ

ಕಡೂರು (ಚಿಕ್ಕಮಗಳೂರು): ಇಲ್ಲಿಗೆ ಸಮೀಪದ ತಂಗಲಿಯಲ್ಲಿ ಮಂಗಳವಾರ ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಸೇತುವೆಯಿಂದ ಕೆಳಗುರುಳಿ 18 ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್, ತಂಗಲಿ ವೇದಾನದಿ ಸೇತುವೆಯ ಮಧ್ಯಭಾಗಕ್ಕೆ ಬಂದಾಗ ಸ್ಟೇರಿಂಗ್ ರಾಡ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿದೆ. ಬಳಿಕ ಸೇತುವೆಯ ಬಲಭಾಗಕ್ಕೆ ಪಲ್ಟಿಯಾಗಿ ಸುಮಾರು 30 ಅಡಿ ಆಳಕ್ಕೆ ಉರುಳಿತು.

ಅದರಲ್ಲಿ 28 ಪ್ರಯಾಣಿಕರಿದ್ದರು. ಗಂಭೀರವಾಗಿ ಗಾಯಗೊಮಡ ಇಬ್ಬರನ್ನು ಶಿವಮೊಗ್ಗಕ್ಕೆ ಸಾಗಿಸಲಾಗಿದ್ದರೆ, ಉಳಿದವರು ಕಡೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

* ಸೇತುವೆ ಮಧ್ಯಕ್ಕೆ ಬಂದಾಗ ದೊಡ್ಡ ಶಬ್ದ ಬಂತು. ಕೂಡಲೇ ಸ್ಟೇರಿಂಗ್ ಫ್ರೀ ಆಗಿ ಬಸ್ ನಿಯಂತ್ರಣ ತಪ್ಪಿ ಕಣ್ಣು ಮುಚ್ಚಿ ಬಿಡುವುದರೊಳಗೆ ಸೇತುವೆಯಿಂದ ಪಲ್ಟಿಯಾಯಿತು.

-ಗೋವಿಂದು, ಬಸ್ ಚಾಲಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT