<p><strong>ಲಖನೌ:</strong> ಉತ್ತರಪ್ರದೇಶದಲ್ಲಿ ಗುರುವಾರ ಮತ್ತು ಶುಕ್ರವಾರ ಸುರಿದ ಗುಡುಗುಸಹಿತ ಸುರಿದ ಭಾರಿ ಮಳೆಗೆ ಮಹಿಳೆಯರು, ಮಕ್ಕಳು ಸೇರಿದಂತೆ ಒಟ್ಟು 35 ಮಂದಿ ಸಾವನ್ನಪ್ಪಿದ್ದಾರೆ.</p>.<p>ಲಖನೌದಿಂದ ಸುಮಾರು 90 ಕಿ.ಮೀ. ದೂರದಲ್ಲಿರುವ ಸೀತಾಪುರ ಜಿಲ್ಲೆಯಲ್ಲಿ ಮಳೆಯಿಂದಾಗಿ ಮನೆ ಕುಸಿದು, ಮಲಗಿದ್ದ 8 ಮಂದಿ ಸಾವನ್ನಪ್ಪಿದ್ದ ಘಟನೆ ನಡೆದಿದೆ.</p>.<p>ಬಹರೈಚ್ ಜಲ್ಲೆಯಲ್ಲಿ ಶಾಲೆಯಿಂದ ಮನೆಗೆ ಮರಳುತ್ತಿದ್ದ ಮಗುವಿನ ಮೇಲೆ ವಿದ್ಯುತ್ ಕಂಬ ಬಿದ್ದು ಮಗು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಆಲಿಕಲ್ಲು ಸಹಿತ ಸುರಿದ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಬೆಳೆದು ನಿಂತಿದ್ದ ಅಪಾರ ಪ್ರಮಾಣದ ಗೋಧಿ ಬೆಳೆ ನಾಶವಾಗಿದೆ.ಬಾರಾಬಂಕಿ, ಲಖಿಂಪುರ್ ಖೇರಿ, ಸುಲ್ತಾನ್ಪುರ, ಪ್ರತಾಪ್ಘರ್, ಹಾರ್ದೊಯಿ ಸೇರಿದಂತೆ ಹಲವು ಕಡೆ ಸಿಡಿಲಿನಿಂದಾಗಿ ಹಲವರು ಸಾವನ್ನಪ್ಪಿದ್ದಾರೆ.</p>.<p>ಮೃತಪಟ್ಟವರ ಕುಟುಂಬಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಲಾ ₹ 4ಲಕ್ಷ ಪರಿಹಾರ ಘೋಷಿಸಿದ್ದಾರೆ.</p>.<p class="Subhead"><strong>ನವದೆಹಲಿ ವರದಿ (ಪಿಟಿಐ):</strong> ನವದೆಹಲಿಯ ಹಲವೆಡೆ ಶನಿವಾರ ಮಧ್ಯಾಹ್ನ ಭಾರಿ ಆಲಿಕಲ್ಲು ಸಹಿತ ಮಳೆಯಾಗಿದೆ. ಪಂಜಾಬ್, ಹರಿಯಾಣ, ಜಾರ್ಖಂಡ್ ಸೇರಿದಂತೆ ಉತ್ತರ ಭಾರತದಲ್ಲಿ ಮಳೆಯಾಗಿದ್ದು ರೈತರಲ್ಲಿ ಸಂತಸ ಮೂಡಿಸಿದೆ.</p>.<p class="Subhead">ದೆಹಲಿಯಲ್ಲಿ ಸುರಿದ ಮಳೆಯಿಂದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದವು. ಜತೆಗೆ, ನಗರದಲ್ಲಿನ ಮಾಲಿನ್ಯವೂ ಕಡಿಮೆ ಯಾಯಿತು. ಕೆಲ ದಿನಗಳಿಂದ ಬಿಸಿಲಿನಿಂದ ತತ್ತರಿಸಿದ್ದ ಜನತೆಗೆ ಮಳೆ ತಂಪೆರೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರಪ್ರದೇಶದಲ್ಲಿ ಗುರುವಾರ ಮತ್ತು ಶುಕ್ರವಾರ ಸುರಿದ ಗುಡುಗುಸಹಿತ ಸುರಿದ ಭಾರಿ ಮಳೆಗೆ ಮಹಿಳೆಯರು, ಮಕ್ಕಳು ಸೇರಿದಂತೆ ಒಟ್ಟು 35 ಮಂದಿ ಸಾವನ್ನಪ್ಪಿದ್ದಾರೆ.</p>.<p>ಲಖನೌದಿಂದ ಸುಮಾರು 90 ಕಿ.ಮೀ. ದೂರದಲ್ಲಿರುವ ಸೀತಾಪುರ ಜಿಲ್ಲೆಯಲ್ಲಿ ಮಳೆಯಿಂದಾಗಿ ಮನೆ ಕುಸಿದು, ಮಲಗಿದ್ದ 8 ಮಂದಿ ಸಾವನ್ನಪ್ಪಿದ್ದ ಘಟನೆ ನಡೆದಿದೆ.</p>.<p>ಬಹರೈಚ್ ಜಲ್ಲೆಯಲ್ಲಿ ಶಾಲೆಯಿಂದ ಮನೆಗೆ ಮರಳುತ್ತಿದ್ದ ಮಗುವಿನ ಮೇಲೆ ವಿದ್ಯುತ್ ಕಂಬ ಬಿದ್ದು ಮಗು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಆಲಿಕಲ್ಲು ಸಹಿತ ಸುರಿದ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಬೆಳೆದು ನಿಂತಿದ್ದ ಅಪಾರ ಪ್ರಮಾಣದ ಗೋಧಿ ಬೆಳೆ ನಾಶವಾಗಿದೆ.ಬಾರಾಬಂಕಿ, ಲಖಿಂಪುರ್ ಖೇರಿ, ಸುಲ್ತಾನ್ಪುರ, ಪ್ರತಾಪ್ಘರ್, ಹಾರ್ದೊಯಿ ಸೇರಿದಂತೆ ಹಲವು ಕಡೆ ಸಿಡಿಲಿನಿಂದಾಗಿ ಹಲವರು ಸಾವನ್ನಪ್ಪಿದ್ದಾರೆ.</p>.<p>ಮೃತಪಟ್ಟವರ ಕುಟುಂಬಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಲಾ ₹ 4ಲಕ್ಷ ಪರಿಹಾರ ಘೋಷಿಸಿದ್ದಾರೆ.</p>.<p class="Subhead"><strong>ನವದೆಹಲಿ ವರದಿ (ಪಿಟಿಐ):</strong> ನವದೆಹಲಿಯ ಹಲವೆಡೆ ಶನಿವಾರ ಮಧ್ಯಾಹ್ನ ಭಾರಿ ಆಲಿಕಲ್ಲು ಸಹಿತ ಮಳೆಯಾಗಿದೆ. ಪಂಜಾಬ್, ಹರಿಯಾಣ, ಜಾರ್ಖಂಡ್ ಸೇರಿದಂತೆ ಉತ್ತರ ಭಾರತದಲ್ಲಿ ಮಳೆಯಾಗಿದ್ದು ರೈತರಲ್ಲಿ ಸಂತಸ ಮೂಡಿಸಿದೆ.</p>.<p class="Subhead">ದೆಹಲಿಯಲ್ಲಿ ಸುರಿದ ಮಳೆಯಿಂದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದವು. ಜತೆಗೆ, ನಗರದಲ್ಲಿನ ಮಾಲಿನ್ಯವೂ ಕಡಿಮೆ ಯಾಯಿತು. ಕೆಲ ದಿನಗಳಿಂದ ಬಿಸಿಲಿನಿಂದ ತತ್ತರಿಸಿದ್ದ ಜನತೆಗೆ ಮಳೆ ತಂಪೆರೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>