ತಿರುವನಂತಪುರಂನಲ್ಲಿ ಸಂಜೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಿಣರಾಯಿ, ಕೇರಳದ ಎಲ್ಲ ಜಿಲ್ಲೆಗಳಲ್ಲಿಯೂ ಸೋಂಕುವ್ಯಾಪಿಸಿರುವುದಾಗಿ ಹೇಳಿದ್ದಾರೆ. ಕಣ್ಣೂರ್ ಜಿಲ್ಲೆಯಲ್ಲಿ - 2, ತ್ರಿಶ್ಶೂರ್, ಕೋಯಿಕ್ಕೋಡ್, ಕೊಲ್ಲಂ ಜಿಲ್ಲೆಗಳಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.ಕೊಲ್ಲಂ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಪ್ರಕರಣ ವರದಿಯಾಗಿದೆ. ಕೇರಳದಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿರುವವರು 164 ಆಗಿದ್ದು, ಈ ಪೈಕಿ 112 ಮಂದಿ ಆಸ್ಪತ್ರೆಯಲ್ಲಿದ್ದಾರೆ.