ಮಂಜು ಕೊಲ್ಲಂ ಜಿಲ್ಲೆಯ ಚತ್ತನೂರಿನವರು. ಮಂಗಳವಾರ ಬೆಳಗ್ಗೆ 4 ಗಂಟೆ ಪಂಬ ತಲುಪಿದ ಅವರು ಇಬ್ಬರು ಪರಿಚಿತ ಯುವಕರ ಜೊತೆಯಲ್ಲಿ ಸಾಮಾನ್ಯ ಭಕ್ತರಂತೆ ಶಬರಿಮಲೆಯನ್ನು ಹತ್ತಿದ್ದಾರೆ. ಈ ವೇಳೆ ಭಕ್ತರಿಂದ ಯಾವ ವಿರೋಧವು ವ್ಯಕ್ತವಾಗಲಿಲ್ಲ ಎಂದು ಮಂಜು ಹೇಳಿಕೊಂಡಿದ್ದಾರೆ. ಬೆಟ್ಟ ಹತ್ತಲು ಸಹಕರಿಸಿದ್ದ ಯುವಕರೇ ನಾನು ದೇವಾಲಯ ಪ್ರವೇಶ ಮಾಡುವುದನ್ನು ವಿಡಿಯೊ ಮಾಡಿದ್ದಾರೆ. ನಂತರ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದಾರೆ ಎಂದು ಮಂಜು ಹೇಳಿದ್ದಾರೆ.