ಚಿರಾಪುಂಜಿ: ಭಾರತ- ಬಾಂಗ್ಲಾದೇಶ ಗಡಿಭಾಗದಲ್ಲಿ ಬುಧವಾರ ಬೆಳಗ್ಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದ್ದು. ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಳಗ್ಗೆ 7.10ಕ್ಕೆ ಭೂಕಂಪ ಸಂಭವಿಸಿದ್ದು, ಸೊಹ್ರಾದ ಆಗ್ನೇಯ ಭಾಗದಲ್ಲಿ 55ಕಿಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇದೆ ಎಂದು ಪ್ರಾದೇಶಿಕ ಭೂಕಂಪಶಾಸ್ತ್ರ ಕೇಂದ್ರ ಹೇಳಿದೆ.
ಮೇಘಾಲಯದಲ್ಲಿ ಭೂಮಿ ಕಂಪಿಸಿದ ಅನುಭವುಂಟಾಗಿದ್ದು ಅಲ್ಲಿಯೂ ಯಾವುದೇ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.