ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ: ಐವರು ಯೋಧರು ಹುತಾತ್ಮ, ಐವರು ಉಗ್ರರ ಹತ್ಯೆ

Last Updated 5 ಏಪ್ರಿಲ್ 2020, 20:11 IST
ಅಕ್ಷರ ಗಾತ್ರ

ಶ್ರೀನಗರ: ಗಡಿಯಲ್ಲಿ ಒಳನುಸುಳಲು ಮುಂದಾಗಿದ್ದ ಉಗ್ರರ ಯತ್ನವನ್ನು ಸೇನಾಪಡೆ ಯೋಧರು ವಿಫಲಗೊಳಿಸಿದ್ದಾರೆ.

ಗುಂಡಿನ ದಾಳಿಯಲ್ಲಿ ಐವರು ಉಗ್ರರು ಹಾಗೂ ಮೂವರು ಯೋಧರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡ ಇಬ್ಬರು ಯೋಧರನ್ನು ಪ್ರತಿಕೂಲ ಹವಾಮಾನದ ಕಾರಣ ಆಸ್ಪತ್ರೆಗೆ ಸಾಗಿಸಲಾಗದೆ ಅಸುನೀಗಿದ್ದಾರೆ.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಕೆರನ್ ವಲಯದಲ್ಲಿ ಭಾನುವಾರ ಉಗ್ರರ ಗುಂಪು ಒಳ ನುಸುಳುವ ಯತ್ನ ನಡೆಸಿತು. ತಕ್ಷಣ ಕಾರ್ಯಪ್ರವೃತರಾದ ಭದ್ರತಾ ಪಡೆಯು ಗುಂಡಿನ ದಾಳಿ ನಡೆಸಿದೆ ಎಂದುರಕ್ಷಣಾ ಇಲಾಖೆ ವಕ್ತಾರ ಕರ್ನಲ್‌ ರಾಜೇಶ್ ಕಲೈ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಸಾಧ್ಯತೆ ಇದ್ದು,ಭಾರಿ ಹಿಮ ಬೀಳುತ್ತಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT