ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂಸಾಚಾರದ ಹಾದಿಯಿಂದ ಹಿಂದೆ ಸರಿದ ಐವರು ಉಗ್ರರು ಪೊಲೀಸರಿಗೆ ಶರಣು

Last Updated 1 ಜೂನ್ 2019, 18:33 IST
ಅಕ್ಷರ ಗಾತ್ರ

ಶ್ರೀನಗರ: ಹಿಂಸಾಚಾರದ ಹಾದಿಯಿಂದ ಹಿಂದೆ ಸರಿದಿರುವ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಐವರು ಯುವಕರು ಶರಣಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

‘ಈ ಐವರು ಯುವಕರು ಬೇರೆ ಬೇರೆ ಉಗ್ರಗಾಮಿ ಸಂಘಟನೆಗಳನ್ನು ಸೇರಿದ್ದರು. ಇವರ ಕುಟುಂಬದವರು ಹಾಗೂ ಪೊಲೀಸರು ನಡೆಸಿದ ಪ್ರಯತ್ನದ ಫಲದಿಂದ ಹಿಂಸಾಚಾರದ ಹಾದಿಯನ್ನು ತೊರೆದು ಮರಳಿ ಮುಖ್ಯ ವಾಹಿನಿಗೆ ಬರಲು ಶರಣಾಗಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭದ್ರತೆಯ ದೃಷ್ಟಿಯಿಂದ ಶರಣಾದವರ ಹೆಸರನ್ನು ಬಹಿರಂಗಗೊಳಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT