ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವು ಕಳ್ಳನೆಂಬ ಆರೋಪ; ವ್ಯಕ್ತಿಯ ಹತ್ಯೆಗೈದ ಅಪರಿಚಿತ ಗುಂಪು

Last Updated 3 ಮೇ 2019, 6:04 IST
ಅಕ್ಷರ ಗಾತ್ರ

ಅರಾರಿಯಾ/ಬಿಹಾರ: ಗೋವು ಕಳ್ಳ ಎಂಬ ಅನುಮಾನದಿಂದ ವ್ಯಕ್ತಿಯೊಬ್ಬರ ಮೇಲೆ ಅಪರಿಚಿತ ಗುಂಪೊಂದು ಬಿಹಾರದ ಅರೆರಿಯಾ ಜಿಲ್ಲೆಯ ದಾಕ್ ಹರಿಪುರ ಗ್ರಾಮದ ಬಳಿ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿ ಅಚ್ರಾ ಗ್ರಾಮದ ನಿವಾಸಿ ಮಹೇಶ್ ಯಾದವ್ (50) ಎಂದು ತಿಳಿದು ಬಂದಿದೆ.ಕೇವಲ ಐದು ತಿಂಗಳಲ್ಲಿ ನಡೆದ ಎರಡನೇ ಘಟನೆ ಇದಾಗಿದೆ.

ಮಹೇಶ್ ಯಾದವ್ ತನ್ನ ಇಬ್ಬರು ಸಹಚರರೊಂದಿಗೆ ಗೋವು ಕದಿಯಲು ಬಂದಿದ್ದಾರೆ ಎಂದು ಆರೋಪಿಸಿಹರಿಪುರ ಗ್ರಾಮಸ್ಥರು ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಶಿವ ಶರಣ್ ಶಾ ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಅಪರಿಚಿತ ವ್ಯಕ್ತಿಗಳ ಮೇಲೆಎಫ್‌ಐಆರ್ ದಾಖಲಿಸಲಾಗಿದೆ ಎಂದು ಫಾರ್ಬೇಸ್‌ಗಂಜ್ ಉಪವಿಭಾಗದ ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT