ಹುಬ್ಬಳ್ಳಿ: ಹಿಂದೂ ಧರ್ಮದ ಸಂರಕ್ಷಣೆ ವಿಷಯದಲ್ಲಿ ಈವರೆಗೂ ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಯೋಗ್ಯ ನಿರ್ಧಾರವನ್ನೇ ಕೈಗೊಂಡಿದ್ದಾರೆ. ಮುಸ್ಲಿಮರಿಗೆ ಕೃಷ್ಣಮಠದಲ್ಲಿ ಇಫ್ತಾರ್ ಕೂಟ ಏರ್ಪಡಿಸುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಮು ಸೌಹಾರ್ದವನ್ನು ಕಾಪಾಡುವ ಕೆಲಸವನ್ನು ಶ್ರೀಗಳು ಮಾಡಿದ್ದಾರೆ. ಪರಧರ್ಮ ಸಹಿಷ್ಣುತೆ ಹಿಂದೂಧರ್ಮದ ಆಶಯವಾಗಿದೆ. ಈ ವಿಷಯವನ್ನು ಯಾರೂ ವಿವಾದವನ್ನಾಗಿ ಮಾಡಬಾರದು' ಎಂದು ಅವರು ಹೇಳಿದರು.