ಭಯೋತ್ಪಾದನೆಗೆ ಪಾಕಿಸ್ತಾನ ನಿರಂತರವಾಗಿ ನೆರವು ಮತ್ತು ಪ್ರಚೋದನೆ ನೀಡುತ್ತಿದೆ. ಇದರಿಂದ, ಭಯೋತ್ಪಾದಕ ಕೃತ್ಯಗಳು ಮುಂದುವರಿದಿವೆ. ಇನ್ನೊಂದೆಡೆ ಭಾರತದ ಜತೆ ಶಾಂತಿ ಮಾತುಕತೆ ನಡೆಸುವುದಾಗಿ ಮತ್ತು ರಚನಾತ್ಮಕ ಕಾರ್ಯಗಳನ್ನು ಕೈಗೊಳ್ಳುವುದಾಗಿ ಪೊಳ್ಳು ಹೇಳಿಕೆಗಳನ್ನು ನೀಡುತ್ತಿದೆ. ಇದು ಪಾಕಿಸ್ತಾನದ ದ್ವಿಮುಖ ನೀತಿಯನ್ನು ಬಿಂಬಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಕಟುವಾಗಿ ಟೀಕಿಸಿದೆ.