ಚೆನ್ನೈ: ಡಿಎಂಕೆ ಮುಖ್ಯಸ್ಥರಾಗಿದ್ದ ದಿವಂಗತ ಎಂ.ಕರುಣಾನಿಧಿ ಅವರ ಪ್ರತಿಮೆಯನ್ನು ಡಿಸೆಂಬರ್ 16 ರಂದು ಅನಾವರಣಗೊಳಿಸಲಾಗುತ್ತದೆ.
ವಿವಿಧ ಪಕ್ಷಗಳ ರಾಷ್ಟ್ರಮಟ್ಟದ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಪಕ್ಷದ ಕಚೇರಿ ಮುಂಭಾಗದಲ್ಲಿರುವ ಡಿಎಂಕೆ ಸಂಸ್ಥಾಪಕ ಸಿ.ಎನ್ ಅಣ್ಣಾದೊರೈ ಪ್ರತಿಮೆ ಪಕ್ಕದಲ್ಲಿ ಕರುಣಾನಿಧಿ ಪ್ರತಿಮೆಯನ್ನು ಅನಾವರಣಗೊಳಿಸಲಾಗುತ್ತದೆ ಎಂದು ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.