ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ವಲಸೆ ಕಾರ್ಮಿಕರ ಮೇಲೆ ಹರಿದ ಸರ್ಕಾರಿ ಬಸ್‌, ಇಬ್ಬರಿಗೆ ಗಾಯ

Last Updated 14 ಮೇ 2020, 2:50 IST
ಅಕ್ಷರ ಗಾತ್ರ

ಮುಜಫರ್‌ನಗರ: ಲಾಕ್‌ಡೌನ್‌ ಹಿನ್ನೆಲೆ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಆರು ಮಂದಿ ವಲಸೆ ಕಾರ್ಮಿಕರ ಮೇಲೆ ಸರ್ಕಾರ ಬಸ್‌ ಹರಿದಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಮಿಕರುಪಂಜಾಬ್‌ನಿಂದ ಬಿಹಾರದಲ್ಲಿರುವ ತಮ್ಮ ಊರುಗಳಿಗೆತೆರಳುತ್ತಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಚಾಲಕ ಬಸ್‌ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವಲಸೆ ಕಾರ್ಮಿಕ ಮೇಲಿನ ಅಪಘಾತ ಪ್ರಕರಣಗಳು ದೇಶದಾದ್ಯಂತ ವರದಿಯಾಗುತ್ತಿವೆ. ಕಳೆದ ವಾರ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಹಳಿಗಳ ಮೇಲೆ ಮಲಗಿದ್ದ 20 ಮಂದಿ ಕಾರ್ಮಿಕರ ಮೇಲೆ ಗೂಡ್ಸ್‌ ರೈಲು ಹರಿದು 16 ಮಂದಿ ಸಾವನ್ನಪ್ಪಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT