ಜೈಪುರ: ಶಾಸನ ಸಭೆಯಲ್ಲಿ ಮಹಿಳೆಯರಿಗೆ ಶೇ33ರಷ್ಟು ವೀಸಲಾತಿ ನೀಡುವ ಸಂಬಂಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದರು.
ಕಾಂಗ್ರೆಸ್ ಅಧಿಕಾರದಲ್ಲಿರುವ ಐದು ರಾಜ್ಯಗಳ ವಿಧಾನಸಭೆಯಲ್ಲಿ ಈ ರೀತಿ ನಿರ್ಣಯ ಅಂಗೀಕರಿಸಬೇಕು ಎಂಬುದು ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರ ಅಪೇಕ್ಷೆಯಾಗಿದ್ದು ಮಹಿಳಾ ಮೀಸಲಾತಿ ಜಾರಿಗೊಳಿಸಲು ನಮ್ಮ ಪಕ್ಷ ಬಯಸಿದೆ ಎಂದು ಗೆಹ್ಲೋಟ್ ಸುದ್ದಿಗಾರರಿಗೆ ತಿಳಿಸಿದರು.
ಶಾಸನ ಸಭೆ ಹಾಗೂ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕೆಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಹೋರಾಟ ಮಾಡಿದ್ದರು. ಅದರ ಫಲವಾಗಿ ಲೋಕಸಭೆಯಲ್ಲಿ ಮಸೂದೆ ಅಂಗೀಕರಿಸಲಾಗಿದೆ.