ಚೆನ್ನೈ: ‘ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಡಿಎಂಡಿಕೆ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಶೀಘ್ರದಲ್ಲಿಯೇ ಶುಭ ಸುದ್ದಿ ನೀಡಲಿದ್ದೇವೆ’ ಎಂದು ಎಐಎಡಿಎಂಕೆ ತಿಳಿಸಿದೆ.
‘ಇನ್ನೆರಡು ದಿನಗಳಲ್ಲಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲಿದ್ದು, ಶುಭ ಸುದ್ದಿಯನ್ನು ಪ್ರಕಟಿಸಲಿದ್ದೇವೆ’ ಎಂದು ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ತಿಳಿಸಿದ್ದಾರೆ.
ಆಡಳಿತಾರೂಢ ಎಐಎಡಿಎಂಕೆ ಈಗಾಗಲೇ ಬಿಜೆಪಿ ಮತ್ತು ಪಿಎಂಕೆ ಜೊತೆಗೆ ಕೈಜೋಡಿಸಿದ್ದು, ಸ್ಥಾನ ಹೊಂದಾಣಿಕೆ ಅಂತಿಮಗೊಳಿಸಿದೆ.ಡಿಎಂಡಿಕೆ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಕಸರತ್ತು ನಡೆಸುತ್ತಿದೆ.