ಮೂರುವರೆ ಸಾವಿರ ವರ್ಷಗಳಷ್ಟು ಇತಿಹಾಸ ಹೊಂದಿರುವ ಸಂಸ್ಕೃತ ಭಾಷೆಯನ್ನು ಪ್ರಚಾರ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮೂರು ಸಂಸ್ಥೆಗಳು ಕಾರ್ಯನಿರತವಾಗಿವೆ. ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ, ದೆಹಲಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಂಸ್ಕೃತ ವಿದ್ಯಾಪೀಠ ಮತ್ತು ತಿರುಪತಿಯಲ್ಲಿರುವ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ.