ಭೂವಿವಾದದ ವಿಚಾರಣೆಗಾಗಿ ಸ್ಥಳಕ್ಕೆ ಹೋಗಿದ್ದ ಹೆಡ್ ಕಾನ್ಸ್ಟೆಬಲ್ ಅಬ್ದುಲ್ ಗನಿ ಹಾಗೂ ಸ್ಥಳೀಯರ ನಡುವೆ ಶನಿವಾರ ಮಾತಿನ ಚಕಮಕಿ ನಡೆದಿತ್ತು. ಅದು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿ, ಕೊನೆಗೆ ಸೇರಿದ್ದ ಜನರೆಲ್ಲರೂ ಗನಿ ಅವರನ್ನು ಥಳಿಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ನಂತರ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.