ನವದೆಹಲಿ: ರಾಜಸ್ಥಾನದ ನಾಗೌರ್ ಜಿಲ್ಲೆಯ ದ್ವಿಚಕ್ರ ವಾಹನ ಷೋರೂಂನಲ್ಲಿ ಹಣ ಕದ್ದಿದ್ದಾರೆ ಎಂದು ಆರೋಪಿಸಿ ಇಬ್ಬರು ದಲಿತ ಯುವಕರನ್ನು ಷೋರೂಂ ಸಿಬ್ಬಂದಿ ಥಳಿಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಪ್ರಕರಣ ಸಂಬಂಧ ಸದ್ಯ ಏಳು ಮಂದಿಯನ್ನುಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂತ್ರಸ್ಥರು ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪಂಚೋಡಿ ಪೊಲೀಸ್ ಠಾಣೆಯ ವರಿಷ್ಠಾಧಿಕಾರಿ ರಾಜ್ಪಾಲ್ ಸಿಂಗ್ ಹೇಳಿದ್ದಾರೆ. ಹಣ ಕದ್ದ ಆರೋಪದಲ್ಲಿ ಇಬ್ಬರು
ದಲಿತರ ವಿರುದ್ಧ ಷೋರೂಂ ಸಿಬ್ಬಂದಿ ದೂರು ನೀಡಿದ್ದಾರೆ.
‘ದಲಿತ ಯುವಕರಿಬ್ಬರನ್ನು ಅಮಾನವೀಯವಾಗಿ ಥಳಿಸಿರುವ ವಿಡಿಯೊ ಭಯಾನಕವಾಗಿದೆ. ಈ ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜಸ್ಥಾನ ಸರ್ಕಾರಕ್ಕೆ ಮನವಿ ಮಾಡಿದ್ದೇನೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.