<p><strong>ನವದೆಹಲಿ</strong>: ಮಹಾತ್ಮ ಗಾಂಧಿ 71ನೇ ಪುಣ್ಯ ಸ್ಮರಣೆ ಅಂಗವಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಮತ್ತುಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ರಾಜ್ಘಾಟ್ನಲ್ಲಿ ಬುಧವಾರ ರಾಷ್ಟ್ರಪಿತನಿಗೆ ಗೌರವ ನಮನ ಸಲ್ಲಿಸಿದರು.</p>.<p>ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಕೂಡ ಗೌರವ ನಮನ ಸಲ್ಲಿಸಿದರು.</p>.<p>ಗಾಂಧೀಜಿ ಅವರ ನೆಚ್ಚಿನ ಗೀತೆ ‘ರಘುಪತಿ ರಾಘವ ರಾಜಾ ರಾಮ್’ ಅನ್ನು ರಾಜ್ಘಾಟ್ನಲ್ಲಿ ಹಾಡಲಾಯಿತು.</p>.<p>ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು.</p>.<p>‘ಬಾಪು ತೋರಿಸಿದ ಮಾರ್ಗ ಮತ್ತು ಅವರು ನಂಬಿದ್ದ ಮಾರ್ಗ ಅನುಸರಿಸಲು ಬದ್ಧರಿದ್ದೇವೆ ಎಂಬುದನ್ನು ಮತ್ತೊಮ್ಮೆ ಹೇಳುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.</p>.<p><strong>ಉಪ್ಪಿನ ಸತ್ಯಾಗ್ರಹ ಸ್ಮಾರಕ ಲೋಕಾರ್ಪಣೆ</strong></p>.<p><strong>ಮುಂಬೈ</strong>: ಗುಜರಾತ್ನ ದಂಡಿಯಲ್ಲಿ ಸ್ಥಾಪಿಸಿರುವ ರಾಷ್ಟ್ರೀಯ ಉಪ್ಪಿನ ಸತ್ಯಾಗ್ರಹ ಸ್ಮಾರಕ ಮತ್ತು ವಸ್ತು ಸಂಗ್ರಹಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ 71ನೇ ವರ್ಷಾಚರಣೆ ನಿಮಿತ್ತ ದೇಶಕ್ಕೆ ಅರ್ಪಣೆ ಮಾಡಿದರು.</p>.<p>ಸ್ಮಾರಕವು ಗಾಂಧೀಜಿ ಪ್ರತಿಮೆ ಮತ್ತು 1930ರಲ್ಲಿ ಗಾಂಧೀಜಿ ಅವರ ಜತೆಗೆ ಐತಿಹಾಸಿ ದಂಡಿ ಯಾತ್ರೆಯಲ್ಲಿ ಪಾಲ್ಗೊಂಡ 80 ಸತ್ಯಾಗ್ರಾಹಿಗಳ ಪ್ರತಿಮೆಗಳನ್ನು ಒಳಗೊಂಡಿದೆ. ಐತಿಹಾಸಿಕ ದಂಡಿಯಾತ್ರೆಯ ಕಥೆಗಳು ಮತ್ತು ವಿವಿಧ ಘಟನೆಗಳನ್ನು ವಿವರಿಸುವ 24 ಭಿತ್ತಿಚಿತ್ರಗಳನ್ನು ಇದು ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಹಾತ್ಮ ಗಾಂಧಿ 71ನೇ ಪುಣ್ಯ ಸ್ಮರಣೆ ಅಂಗವಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಮತ್ತುಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ರಾಜ್ಘಾಟ್ನಲ್ಲಿ ಬುಧವಾರ ರಾಷ್ಟ್ರಪಿತನಿಗೆ ಗೌರವ ನಮನ ಸಲ್ಲಿಸಿದರು.</p>.<p>ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಕೂಡ ಗೌರವ ನಮನ ಸಲ್ಲಿಸಿದರು.</p>.<p>ಗಾಂಧೀಜಿ ಅವರ ನೆಚ್ಚಿನ ಗೀತೆ ‘ರಘುಪತಿ ರಾಘವ ರಾಜಾ ರಾಮ್’ ಅನ್ನು ರಾಜ್ಘಾಟ್ನಲ್ಲಿ ಹಾಡಲಾಯಿತು.</p>.<p>ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು.</p>.<p>‘ಬಾಪು ತೋರಿಸಿದ ಮಾರ್ಗ ಮತ್ತು ಅವರು ನಂಬಿದ್ದ ಮಾರ್ಗ ಅನುಸರಿಸಲು ಬದ್ಧರಿದ್ದೇವೆ ಎಂಬುದನ್ನು ಮತ್ತೊಮ್ಮೆ ಹೇಳುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.</p>.<p><strong>ಉಪ್ಪಿನ ಸತ್ಯಾಗ್ರಹ ಸ್ಮಾರಕ ಲೋಕಾರ್ಪಣೆ</strong></p>.<p><strong>ಮುಂಬೈ</strong>: ಗುಜರಾತ್ನ ದಂಡಿಯಲ್ಲಿ ಸ್ಥಾಪಿಸಿರುವ ರಾಷ್ಟ್ರೀಯ ಉಪ್ಪಿನ ಸತ್ಯಾಗ್ರಹ ಸ್ಮಾರಕ ಮತ್ತು ವಸ್ತು ಸಂಗ್ರಹಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ 71ನೇ ವರ್ಷಾಚರಣೆ ನಿಮಿತ್ತ ದೇಶಕ್ಕೆ ಅರ್ಪಣೆ ಮಾಡಿದರು.</p>.<p>ಸ್ಮಾರಕವು ಗಾಂಧೀಜಿ ಪ್ರತಿಮೆ ಮತ್ತು 1930ರಲ್ಲಿ ಗಾಂಧೀಜಿ ಅವರ ಜತೆಗೆ ಐತಿಹಾಸಿ ದಂಡಿ ಯಾತ್ರೆಯಲ್ಲಿ ಪಾಲ್ಗೊಂಡ 80 ಸತ್ಯಾಗ್ರಾಹಿಗಳ ಪ್ರತಿಮೆಗಳನ್ನು ಒಳಗೊಂಡಿದೆ. ಐತಿಹಾಸಿಕ ದಂಡಿಯಾತ್ರೆಯ ಕಥೆಗಳು ಮತ್ತು ವಿವಿಧ ಘಟನೆಗಳನ್ನು ವಿವರಿಸುವ 24 ಭಿತ್ತಿಚಿತ್ರಗಳನ್ನು ಇದು ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>