ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಹಿಂಸಾಚಾರ | 79 ಮನೆ, 327 ಗುಡಿಸಲು ನಾಶ

Last Updated 3 ಮಾರ್ಚ್ 2020, 19:29 IST
ಅಕ್ಷರ ಗಾತ್ರ

ನವದೆಹಲಿ: ನವದೆಹಲಿಯ ಈಶಾನ್ಯ ಭಾಗದಲ್ಲಿ ನಡೆದ ಹಿಂಸಾಚಾರದಲ್ಲಿ 79 ಮನೆಗಳು, 327 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಹೇಳಿದ್ದಾರೆ.

ಪೊಲೀಸರ ಪ್ರಕಾರ 41 ಮಂದಿ ಮೃತಪಟ್ಟಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಗಲಭೆಯಲ್ಲಿ ನೊಂದವರಿಗೆ ಸರ್ಕಾರ ಈವರೆಗೆ ಒಟ್ಟು ₹ 38.75 ಲಕ್ಷ ಪರಿಹಾರ ವಿತರಿಸಿದೆ. ಮೃತರ ಕುಟುಂಬಗಳಿಗೆ ಒಟ್ಟು ₹ 22 ಲಕ್ಷಪರಿಹಾರ ವಿತರಿಸಲಾಗಿದೆ ಎಂದು ವಿವರಿಸಿದರು.

ಈ ಮಧ್ಯೆ, 1000ಕ್ಕೂ ಅಧಿಕ ಸಂತ್ರಸ್ತರು ಮುಸ್ತಾಫಾಬಾದ್‌ನಲ್ಲಿ ತೆರೆದಿರುವ ಪರಿಹಾರ ಶಿಬಿರಕ್ಕೆ ಕಳೆದ 24 ಗಂಟೆಗಳಲ್ಲಿ ಬಂದಿದ್ದಾರೆ. ಬಹುತೇಕರು ಶಿವಪುರಿ, ಮುಸ್ತಾಫಾಬಾದ್‌, ಕರವಲ್‌ ನಗರ್‌ ಭಾಗದವರು ಎಂದು ಸರ್ಕಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT