<p><strong>ಪಟ್ನಾ</strong>: ವೈಶಾಲಿ ಜಿಲ್ಲೆಯ ಸಹದೇಯಿ ಬುಜುರ್ಗ್ ಎಂಬಲ್ಲಿ ಸೀಮಾಂಚಲ ಎಕ್ಸ್ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಆರು ಪ್ರಯಾಣಿಕರು ಮೃತಪಟ್ಟಿದ್ದಾರೆ.</p>.<p>ಬಿಹಾರದ ಜೋಗ್ಬನಿಯಿಂದ ದೆಹಲಿಯ ಆನಂದ್ ವಿಹಾರ ಟರ್ಮಿನಲ್ಗೆ ಹೊರಟಿದ್ದ ರೈಲು 340 ಕಿ.ಮೀ. ಕ್ರಮಿಸಿದ್ದಾಗ, ಪೂರ್ವ ಕೇಂದ್ರ ರೈಲ್ವೆಯ ಸೋನೆಪುರ ವಿಭಾಗೀಯ ವ್ಯಾಪ್ತಿಯಲ್ಲಿ ಭಾನುವಾರ ಬೆಳಗಿನ ಜಾವ 4 ಗಂಟೆಗೆ ಅಪಘಾತ ಸಂಭವಿಸಿದೆ. 40 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.</p>.<p>ಹಳಿ ತುಂಡಾಗಿರುವುದು ಅಪಘಾತಕ್ಕೆ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿದೆ. ಒಂದು ಎ.ಸಿ., ಮೂರು ಸ್ಲೀಪರ್ ಬೋಗಿಗಳು ಸೇರಿದಂತೆ 11 ಬೋಗಿಗಳು ಹಳಿ ತಪ್ಪಿವೆ ಎಂದು ಪೂರ್ವ ಕೇಂದ್ರ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಜೀವ್ ಕುಮಾರ್ ತಿಳಿಸಿದ್ದಾರೆ.</p>.<p>ದುರಂತ ಸ್ಥಳದಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರು ಮತ್ತು ಆಹಾರದ ವ್ಯವಸ್ಥೆಯನ್ನು ರೈಲ್ವೆ ಇಲಾಖೆ ಕಲ್ಪಿಸಿತ್ತು. ರಕ್ಷಣಾ ಕಾರ್ಯಕ್ಕೆ ಸ್ಥಳೀಯರು ನೆರವು ನೀಡಿದರು.</p>.<p>ಮೃತಪಟ್ಟವರ ಕುಟುಂಬಗಳಿಗೆ ತಲಾ ₹5 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ₹1ಲಕ್ಷ, ಸಣ್ಣಪುಟ್ಟ ಗಾಯಗೊಂಡವರಿಗೆ ₹50 ಸಾವಿರ ಪರಿಹಾರವನ್ನು ರೈಲ್ವೆ ಸಚಿವ ಪೀಯೂಷ್ ಗೋಯಲ್ ಘೋಷಿಸಿದ್ದಾರೆ.</p>.<p>ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತರ ಕುಟುಂಬಕ್ಕೆ ₹ 4 ಲಕ್ಷ ಘೋಷಿಸಿದ್ದಾರೆ.</p>.<p>ಜೋಗಬನೀ–ಆನಂದ್ ವಿಹಾರ್ ಟರ್ಮಿನಲ್ ಸೀಮಾಂಚಲ್ ಎಕ್ಸ್ಪ್ರೆಸ್ 12487 ರೈಲಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿಆರು ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 24ಕ್ಕೂ ಹೆಚ್ಚುಜನ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರೈಲ್ವೆ ಸಚಿವ ಪೀಯೂಷ್ ಗೋಯಲ್ ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿದ್ದಾರೆ.</p>.<p>ಸೋನ್ಪುರ್ ಹಾಗೂ ಬರೌನಿಯಿಂದ ವೈದ್ಯರ ತಂಡ ಅಪಘಾತ ನಡೆದಿರುವ ಸ್ಥಳಕ್ಕೆ ತೆರಳಿದ್ದಾರೆ. ಅಪಘಾತ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಸಹಕಾರಿಯಾಗುವ ರೈಲು ಸಹ ಸ್ಥಳಕ್ಕೆ ತೆರಳಿದೆ.</p>.<p>ರೈಲ್ವೆ ಸಹಾಯವಾಣಿ ಸಂಖ್ಯೆ: ಸೋನ್ಪುರ್– 06158221645, ಹಾಜಿಪುರ್– 06224272230 ಹಾಗೂ ಬರೌನಿ– 06279232222</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ವೈಶಾಲಿ ಜಿಲ್ಲೆಯ ಸಹದೇಯಿ ಬುಜುರ್ಗ್ ಎಂಬಲ್ಲಿ ಸೀಮಾಂಚಲ ಎಕ್ಸ್ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಆರು ಪ್ರಯಾಣಿಕರು ಮೃತಪಟ್ಟಿದ್ದಾರೆ.</p>.<p>ಬಿಹಾರದ ಜೋಗ್ಬನಿಯಿಂದ ದೆಹಲಿಯ ಆನಂದ್ ವಿಹಾರ ಟರ್ಮಿನಲ್ಗೆ ಹೊರಟಿದ್ದ ರೈಲು 340 ಕಿ.ಮೀ. ಕ್ರಮಿಸಿದ್ದಾಗ, ಪೂರ್ವ ಕೇಂದ್ರ ರೈಲ್ವೆಯ ಸೋನೆಪುರ ವಿಭಾಗೀಯ ವ್ಯಾಪ್ತಿಯಲ್ಲಿ ಭಾನುವಾರ ಬೆಳಗಿನ ಜಾವ 4 ಗಂಟೆಗೆ ಅಪಘಾತ ಸಂಭವಿಸಿದೆ. 40 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.</p>.<p>ಹಳಿ ತುಂಡಾಗಿರುವುದು ಅಪಘಾತಕ್ಕೆ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿದೆ. ಒಂದು ಎ.ಸಿ., ಮೂರು ಸ್ಲೀಪರ್ ಬೋಗಿಗಳು ಸೇರಿದಂತೆ 11 ಬೋಗಿಗಳು ಹಳಿ ತಪ್ಪಿವೆ ಎಂದು ಪೂರ್ವ ಕೇಂದ್ರ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಜೀವ್ ಕುಮಾರ್ ತಿಳಿಸಿದ್ದಾರೆ.</p>.<p>ದುರಂತ ಸ್ಥಳದಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರು ಮತ್ತು ಆಹಾರದ ವ್ಯವಸ್ಥೆಯನ್ನು ರೈಲ್ವೆ ಇಲಾಖೆ ಕಲ್ಪಿಸಿತ್ತು. ರಕ್ಷಣಾ ಕಾರ್ಯಕ್ಕೆ ಸ್ಥಳೀಯರು ನೆರವು ನೀಡಿದರು.</p>.<p>ಮೃತಪಟ್ಟವರ ಕುಟುಂಬಗಳಿಗೆ ತಲಾ ₹5 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ₹1ಲಕ್ಷ, ಸಣ್ಣಪುಟ್ಟ ಗಾಯಗೊಂಡವರಿಗೆ ₹50 ಸಾವಿರ ಪರಿಹಾರವನ್ನು ರೈಲ್ವೆ ಸಚಿವ ಪೀಯೂಷ್ ಗೋಯಲ್ ಘೋಷಿಸಿದ್ದಾರೆ.</p>.<p>ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತರ ಕುಟುಂಬಕ್ಕೆ ₹ 4 ಲಕ್ಷ ಘೋಷಿಸಿದ್ದಾರೆ.</p>.<p>ಜೋಗಬನೀ–ಆನಂದ್ ವಿಹಾರ್ ಟರ್ಮಿನಲ್ ಸೀಮಾಂಚಲ್ ಎಕ್ಸ್ಪ್ರೆಸ್ 12487 ರೈಲಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿಆರು ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 24ಕ್ಕೂ ಹೆಚ್ಚುಜನ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರೈಲ್ವೆ ಸಚಿವ ಪೀಯೂಷ್ ಗೋಯಲ್ ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿದ್ದಾರೆ.</p>.<p>ಸೋನ್ಪುರ್ ಹಾಗೂ ಬರೌನಿಯಿಂದ ವೈದ್ಯರ ತಂಡ ಅಪಘಾತ ನಡೆದಿರುವ ಸ್ಥಳಕ್ಕೆ ತೆರಳಿದ್ದಾರೆ. ಅಪಘಾತ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಸಹಕಾರಿಯಾಗುವ ರೈಲು ಸಹ ಸ್ಥಳಕ್ಕೆ ತೆರಳಿದೆ.</p>.<p>ರೈಲ್ವೆ ಸಹಾಯವಾಣಿ ಸಂಖ್ಯೆ: ಸೋನ್ಪುರ್– 06158221645, ಹಾಜಿಪುರ್– 06224272230 ಹಾಗೂ ಬರೌನಿ– 06279232222</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>