<p>ದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿರುವ ಮಧ್ಯೆಯೇದೆಹಲಿ ಬಿಜೆಪಿ ಘಟಕವು ತನ್ನ ಕಚೇರಿ ಎದುರು ಬ್ಯಾನರ್ವೊಂದನ್ನು ಹಾಕಿದ್ದು, ಅದರಲ್ಲಿ ಸೋಲು–ಗೆಲುವಿನ ಕುರಿತ ಮಾರ್ಮಿಕ ಸಂದೇಶವೊಂದನ್ನು ಉಲ್ಲೇಖಿಸಿದೆ.</p>.<p>ಅಮಿತ್ ಶಾ ಅವರ ಭಾವಚಿತ್ರವೂ ಈ ಬ್ಯಾನರ್ನಲ್ಲಿ ಸೋಲು ಮತ್ತು ಗೆಲುವುಗಳ ಕುರಿತು ಹೀಗೆ ಬರೆಯಲಾಗಿದೆ... ‘ವಿಜಯ ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುವುದಿಲ್ಲ. ಸೋಲು ನಮ್ಮನ್ನು ನಿರಾಶವಾದಿಗಳನ್ನಾಗಿ ಮಾಡುವುದಿಲ್ಲ,’ ಎಂಬ ಸಂದೇಶವನ್ನು ಹಿಂದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಈಗಾಗಲೇ ಎಎಪಿ ಬಹುಮತಕ್ಕೆ ಬೇಕಾದ ಸಂಖ್ಯೆಗಳನ್ನೂ ಮೀರಿದ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.</p>.<p>ಅಧಿಕಾರಕ್ಕೇರಲು ಬೇಕಾದಷ್ಟು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿಲ್ಲವಾದರೂ, ಕಳೆದ ಬಾರಿಗಿಂತಲೂ ಉತ್ತಮ ಸಾಧನೆ ಮಾಡುವಲ್ಲಿ ಅದುಸಫಲವಾಗಿದೆ.</p>.<p>ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಸಾಕಷ್ಟು ಪರಿಶ್ರಮ ಹಾಕಿತ್ತು. ಸ್ವತಃ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಲವು ಸಮಾವೇಶಗಳಲ್ಲಿ ಭಾಗವಹಿಸಿದ್ದರು. ಬಿಜೆಪಿ ತನ್ನ 270 ಸಂಸದರನ್ನು ಚುನಾವಣಾ ಪ್ರಚಾರ ಕಣಕ್ಕೆ ಇಳಿಸಿತ್ತು.</p>.<p>ಬೆಳಗ್ಗೆ 10.30 ಹೊತ್ತಿಗೆ ಎಎಪಿ 49 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಜೆಪಿ 21 ಕ್ಷೇತ್ರಗಳಲ್ಲಿ ಮುಂದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಕೇವಲ ಮೂರು ಸ್ಥಾನಗಳಲ್ಲಷ್ಟೇ ಗೆದ್ದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿರುವ ಮಧ್ಯೆಯೇದೆಹಲಿ ಬಿಜೆಪಿ ಘಟಕವು ತನ್ನ ಕಚೇರಿ ಎದುರು ಬ್ಯಾನರ್ವೊಂದನ್ನು ಹಾಕಿದ್ದು, ಅದರಲ್ಲಿ ಸೋಲು–ಗೆಲುವಿನ ಕುರಿತ ಮಾರ್ಮಿಕ ಸಂದೇಶವೊಂದನ್ನು ಉಲ್ಲೇಖಿಸಿದೆ.</p>.<p>ಅಮಿತ್ ಶಾ ಅವರ ಭಾವಚಿತ್ರವೂ ಈ ಬ್ಯಾನರ್ನಲ್ಲಿ ಸೋಲು ಮತ್ತು ಗೆಲುವುಗಳ ಕುರಿತು ಹೀಗೆ ಬರೆಯಲಾಗಿದೆ... ‘ವಿಜಯ ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುವುದಿಲ್ಲ. ಸೋಲು ನಮ್ಮನ್ನು ನಿರಾಶವಾದಿಗಳನ್ನಾಗಿ ಮಾಡುವುದಿಲ್ಲ,’ ಎಂಬ ಸಂದೇಶವನ್ನು ಹಿಂದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಈಗಾಗಲೇ ಎಎಪಿ ಬಹುಮತಕ್ಕೆ ಬೇಕಾದ ಸಂಖ್ಯೆಗಳನ್ನೂ ಮೀರಿದ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.</p>.<p>ಅಧಿಕಾರಕ್ಕೇರಲು ಬೇಕಾದಷ್ಟು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿಲ್ಲವಾದರೂ, ಕಳೆದ ಬಾರಿಗಿಂತಲೂ ಉತ್ತಮ ಸಾಧನೆ ಮಾಡುವಲ್ಲಿ ಅದುಸಫಲವಾಗಿದೆ.</p>.<p>ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಸಾಕಷ್ಟು ಪರಿಶ್ರಮ ಹಾಕಿತ್ತು. ಸ್ವತಃ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಲವು ಸಮಾವೇಶಗಳಲ್ಲಿ ಭಾಗವಹಿಸಿದ್ದರು. ಬಿಜೆಪಿ ತನ್ನ 270 ಸಂಸದರನ್ನು ಚುನಾವಣಾ ಪ್ರಚಾರ ಕಣಕ್ಕೆ ಇಳಿಸಿತ್ತು.</p>.<p>ಬೆಳಗ್ಗೆ 10.30 ಹೊತ್ತಿಗೆ ಎಎಪಿ 49 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಜೆಪಿ 21 ಕ್ಷೇತ್ರಗಳಲ್ಲಿ ಮುಂದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಕೇವಲ ಮೂರು ಸ್ಥಾನಗಳಲ್ಲಷ್ಟೇ ಗೆದ್ದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>