ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಯ ಅರ್ಜಿ: ನಾಳೆಗೆ ಮುಂದೂಡಿಕೆ

Last Updated 30 ಮೇ 2018, 19:40 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಂಕುಗಳ ಸಾಲ ಮರುಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಕಿಂಗ್‌ಫಿಷರ್ ಏರ್‌ಲೈನ್ಸ್ ಸಂಸ್ಥೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ಜೂನ್‌ 1ಕ್ಕೆ ಮುಂದೂಡಿದೆ.

ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಮೇಲ್ಮನವಿದಾರರು ಹಾಗೂ ಪ್ರತಿವಾದಿಗಳ ಕಡೆಯ ವಾದ-ಪ್ರತಿವಾದ ಆಲಿಸಿತು.

ಮಲ್ಯ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಜಿ.ರಾಘವನ್, ‘ಡಿಆರ್‌ಎಟಿ ತನ್ನ ವ್ಯಾಪ್ತಿ ಮೀರಿ ಹಣ ಠೇವಣಿ ಇರಿಸಲು ಆದೇಶಿಸಿದೆ. ಆದ್ದರಿಂದ ಈ ಆದೇಶ ರದ್ದುಪಡಿಸಬೇಕು’ ಎಂದು ಕೋರಿದರು.

ಬ್ಯಾಂಕುಗಳ ಒಕ್ಕೂಟದ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್.ಎಸ್.ನಾಗಾನಂದ ಅವರು, ‘ವಿಜಯ್ ಮಲ್ಯ ಸುಮಾರು ₹ 10 ಸಾವಿರ ಕೋಟಿ ರೂಪಾಯಿಗಳಷ್ಟು ಸಾಲ ತೀರಿಸಬೇಕಿದೆ’ ಎಂದರು.

‘ಬೆಂಗಳೂರಿನ ಸಾಲ ವಸೂಲಾತಿ ನ್ಯಾಯಮಂಡಳಿ (ಡಿಆರ್‌ಟಿ) ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕಂಪನಿ ಮೇಲ್ಮನವಿ ಸಲ್ಲಿಸಿತ್ತು. ಇದರನ್ವಯ ಚೆನ್ನೈನ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ (ಡಿಆರ್‌ಎಟಿ) ಕಂಪನಿಗೆ ₹ 3,101 ಕೋಟಿ ರೂಪಾಯಿ ಠೇವಣಿ ಇರಿಸುವಂತೆ ಆದೇಶಿಸಿತ್ತು. ಆ ಆದೇಶ ಸರಿ ಇದೆ ಮತ್ತು ಅಂತಹ ಆದೇಶ ನೀಡುವ ಅಧಿಕಾರ ಡಿಆರ್‌ಎಟಿಗೆ ಇದೆ’ ಎಂದು ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT