ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ ಖಾತೆ, ಸಿಮ್‌ ಕಾರ್ಡ್‌ಗೆ ಆಧಾರ್‌ ಸಂಖ್ಯೆ ಕಡ್ಡಾಯವಲ್ಲ

ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ
Last Updated 3 ಮಾರ್ಚ್ 2019, 17:23 IST
ಅಕ್ಷರ ಗಾತ್ರ

ನವದೆಹಲಿ: ಬ್ಯಾಂಕ್‌ನಲ್ಲಿ ಖಾತೆ ತೆರೆಯಲು ಮತ್ತು ಮೊಬೈಲ್‌ ಸಿಮ್‌ ಕಾರ್ಡ್‌ ಪಡೆಯುವಾಗ ಗುರುತಿನ ಪುರಾವೆಯಾಗಿ ಆಧಾರ್‌ ಸಂಖ್ಯೆ ನಮೂದಿಸುವುದನ್ನು ಕಡ್ಡಾಯ ಮಾಡುವಂತಿಲ್ಲ ಎಂಬ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಶನಿವಾರ ಅಂಕಿತ ಹಾಕಿದ್ದಾರೆ.

ರಾಜ್ಯಸಭೆಯಲ್ಲಿ ಈ ಸುಗ್ರೀವಾಜ್ಞೆಗೆ ಅನುಮೋದನೆ ಸಿಗದಿದ್ದರಿಂದ ಅವಧಿ ಮುಗಿದ ಕಾರಣ ಕೇಂದ್ರ ಸರ್ಕಾರ ಈಗ ಮತ್ತೊಮ್ಮೆ ಸುಗ್ರೀವಾಜ್ಞೆ ಮೊರೆ ಹೋಗಿದೆ.

ಆಧಾರ್‌ ಕಾರ್ಡ್‌ ಬಳಕೆ ಮತ್ತು ಖಾಸಗಿತನ ಕಾಪಾಡಲು ರೂಪಿಸಿರುವ ನಿಯಮಗಳ ಉಲ್ಲಂಘನೆಗೆ ದಂಡ ವಿಧಿಸುವ ತಿದ್ದುಪಡಿ ಇರುವ ಮಸೂದೆಯನ್ನು ಜಾರಿಗೆ ತರಲು ಈ ಸುಗ್ರೀವಾಜ್ಞೆಗೆ ಕಳೆದ ವಾರ ಸಂಪುಟ ಅನುಮೋದನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT